ಗದಗ: ‘ಶಾಸಕ ಶ್ರೀರಾಮುಲು ವಿರುದ್ಧ ಸಿದ್ಧರಾಮಯ್ಯ ಅವರು 420 ಪದ ಬಳಸಿರುವುದು ಇಡೀ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದಂತೆ. ಅವರ ಬಾಯಲ್ಲಿ ಇಂಥ ಮಾತು ನಿರೀಕ್ಷಿಸಿರಲಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಗುರುವಾರ ಇಲ್ಲಿನ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದ ಅವರು, ಲಿಂಗೈಕ್ಯರಾದ ತೋಂಟದ ಶ್ರೀಗಳ ಗದ್ದುಗೆ ದರ್ಶನ ಪಡೆದು, ನಮನ ಸಲ್ಲಿಸಿದರು.