ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂಚೋಳಿ: ಬಾವಗಿ ಭದ್ರೇಶ್ವರ ದರ್ಶನ ಪಡೆದ ಬಿಎಸ್‌ವೈ

Last Updated 15 ಮೇ 2019, 6:36 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ಇಲ್ಲಿಗೆ ಸಮೀಪದ ತೆಲಂಗಾಣದ ತಾಂಡೂರಿನಲ್ಲಿರುವ ಪ್ರಸಿದ್ಧ ಬಾವಗಿ ಭದ್ರೇಶ್ವರ ದೇವಾಲಯಕ್ಕೆ ಬುಧವಾರ ಭೇಟಿ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದೇವರ ದರ್ಶನ ಪಡೆದರು.

ದರ್ಶನ ಬಳಿಕ ಅರ್ಚಕರು ಯಡಿಯೂರಪ್ಪ ಅವರನ್ನು ಸನ್ಮಾನಿಸಿದರು. ವೀರಶೈವ ಲಿಂಗಾಯತ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿದ್ದರು. 15 ಸಾವಿರಕ್ಕೂ ಅಧಿಕ ವೀರಶೈವ ಲಿಂಗಾಯತ ಸಮಾಜದ ಜನರು ತಾಂಡೂರಿನಲ್ಲಿದ್ದಾರೆ.

ವೀರಶೈವ ಲಿಂಗಾಯತರನ್ನು ಹಿಂದುಳಿದ ವರ್ಗ ‘ಎ’ಗೆ ಸೇರಿಸಬೇಕು. ಕಲ್ಯಾಣ ಮಂಟಪದ ಅಗತ್ಯವಿದೆ ಎಂದು ಸಮಾಜದ ಕಾರ್ಯದರ್ಶಿ ಶೇಖರ್ ಮನವಿ ಮಾಡಿದರು

ಶಾಸಕರಾದ ಬಿ.ಜಿ.ಪಾಟೀಲ, ಬಸವರಾಜ ಮತ್ತಿಮೂಡ, ಶಶೀಲ್ ಜಿ.ನಮೋಶಿ, ಸಮಾಜದ ಅಧ್ಯಕ್ಷ ವಾಲಿ ಶಾಂತಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT