ಬಿಜೆಪಿ ಕಾರ್ಯಕರ್ತ, ಕೆರಗೋಡು ಶಕ್ತಿ ಕೇಂದ್ರದ ಅಧ್ಯಕ್ಷ ಶಿವಕುಮಾರ್ ಆರಾಧ್ಯ 2018ರ ವಿಧಾನಸಭಾ ಚುನಾವಣೆ ವೇಳೆ ನಗರದ ಕಾಳಿಕಾಂಬಾ ದೇವಾಲಯದ ಎದುರು ಶಪಥ ಮಾಡಿ ಚಪ್ಪಲಿ ತ್ಯಜಿಸಿದ್ದರು. ಚುನಾವಣೆ ನಂತರ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೂ ಸ್ಥಾನ ಅಲುಗಾಡುತ್ತಿದ್ದ ಕಾರಣ ಆಗಲೂ ಶಿವಕುಮಾರ್ ಚಪ್ಪಲಿ ಧರಿಸಲಿಲ್ಲ. ಕಳೆದ 2.2 ವರ್ಷದಿಂದಲೂ ಅವರು ಬರಿಗಾಲಿನಲ್ಲೇ ಓಡಾಡುತ್ತಿದ್ದರು.