ಬೆಂಗಳೂರು: ಕೊರೊನಾ ವೈರಸ್ (ಕೋವಿಡ್–19) ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇತರ ಸಚಿವರು ಶುಕ್ರವಾರದ ಸಂಪುಟ ಸಭೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರು.
ಮುಖ್ಯಮಂತ್ರಿಗಳು ಮತ್ತು ಇತರ ಸಚಿವರು ದೂರ ಕುಳಿತುಕೊಂಡೇ ಸಭೆ ನಡೆಸಿದರು.
ಬುಧವಾರ ನಡೆದಿದ್ದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವರು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಇದೀಗ ರಾಜ್ಯ ಸಚಿವ ಸಂಪುಟವೂ ಅದೇ ಹಾದಿಯನ್ನು ಅನುಸರಿಸಿದೆ.