ಶಿರ್ವ: ಕುತ್ಯಾರು ಯಾಗ ಸಂಘಟನಾ ಸಮಿತಿಯ ಆಶ್ರಯದಲ್ಲಿ ಐದು ದಿನಗಳ ಪರ್ಯಂತ ನಡೆಯುವ ಸಹಸ್ರಮಾನ ನವಕುಂಡ ಶ್ರೀ ಮಹಾಗಣಪತಿ ಅಥರ್ವ ಶೀರ್ಷ ಯಾಗಕ್ಕೆ ಕುತ್ಯಾರು ಕೇಂಜ ಶ್ರೀಧರ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯುವ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುಮಾರು 15 ನಿಮಿಷಗಳ ಕಾಲ ಸಂಕಲ್ಪದಲ್ಲಿ ಪಾಲ್ಗೊಂಡರು. ಯಾಗಮಂಟಪದಲ್ಲಿ ಭಕ್ತಿ ಶ್ರದ್ಧೆಯಿಂದ ವಿರಾಜಮಾನರಾಗಿ ವೈದಿಕರ ಅನತಿಯಂತೆ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.