‘ರಾಜೀನಾಮೆ ಸಲ್ಲಿಸಿದ ಶಾಸಕರು ಅನರ್ಹರಲ್ಲ. ಕಾಂಗ್ರೆಸ್, ಜೆಡಿಎಸ್ನೊಳಗಿನ ಕೆಟ್ಟ ವಾತಾವರಣದಿಂದ ಮನನೊಂದು ರಾಜೀನಾಮೆ ನೀಡಿದವರು. ಇವರಿಂದಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೊಂಡಿದೆ. ಇವರಿಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹಿರಿಯ ಶಾಸಕ ಉಮೇಶ ಕತ್ತಿ ಸೇರಿದಂತೆ ಇನ್ನಿತರರು ನೀಡುವ ಯಾವೊಂದು ಹೇಳಿಕೆಗೆ ಮನ್ನಣೆ ನೀಡುವ ಅಗತ್ಯವಿಲ್ಲ. ಅವೆಲ್ಲವೂ ಗೌಣ. ಯಡಿಯೂರಪ್ಪ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ’ ಎಂದು ಸೋಮಣ್ಣ ಹೇಳಿದರು.