ಮುಖ್ಯಮಂತ್ರಿ ಶ್ರೀ @BSYBJP ಅವರು, ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು ಜಲಸಮಾಧಿಯಾದ 7 ಮಂದಿಗೆ 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಯಿಂದ ಒಟ್ಟು 22 ಲಕ್ಷ ರೂ. ಪರಿಹಾರ ಒದಗಿಸಲು ಸೂಚಿಸಿದ್ದಾರೆ. ನಾಗಮಂಗಲ ತಾಲೂಕು ಬೀರನಹಳ್ಳಿಯ 1/2
2/2 ಶ್ರೀಮತಿ ಗೀತಾ, ಕು ಸವಿತಾ ಹಾಗೂ ಕು ಸೌಮ್ಯ ಅವರಿಗೆ ತಲಾ 5 ಲಕ್ಷ ರೂ., ಇದೇ ತಾಲೂಕಿನ ಚೋಳಸಂದ್ರದ ಕು ರಶ್ಮಿ ಮತ್ತು ಕು ಇಂಚರಾ, ಕೆ ಆರ್ ಪೇಟೆ ತಾಲ್ಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರಿಗೆ ತಲಾ 2 ಲಕ್ಷ ರೂಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.