ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಗೀತಾ, ಸವಿತಾ ಹಾಗೂ ಸೌಮ್ಯ ಅವರಿಗೆ ತಲಾ ₹5 ಲಕ್ಷ ಹಾಗೂ ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ರಶ್ಮಿ ಮತ್ತು ಇಂಚರಾ, ಕೆ.ಆರ್. ಪೇಟೆ ತಾಲ್ಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರಿಗೆ ತಲಾ ₹2 ಲಕ್ಷಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.