ಇತರ ರಾಜ್ಯಗಳಲ್ಲಿರುವ ಕೋವಿಡ್–19 ಪರಿಸ್ಥಿತಿಗೆ ಹೋಲಿಸಿದರೆ ನಮ್ಮಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಹೀಗಾಗಿ ಕೆಂಪು ವಲಯ ಹೊರತುಪಡಿಸಿ ಉಳಿದ ಕಡೆಗಳಲ್ಲಿ ವ್ಯಾಪಾರ, ಕಟ್ಟಡ ನಿರ್ಮಾಣ ಕಾಮಗಾರಿ, ಕೈಗಾರಿಕೆ ಕೆಲಸ ಮತ್ತೆ ಆರಂಭಿಸಬೇಕಾಗಿದೆ. ಈ ಕಾರಣಕ್ಕೆ, ಕಾರ್ಮಿಕರ ಅನಗತ್ಯ ಪ್ರಯಾಣ ನಿಯಂತ್ರಿಸಬೇಕಾದ ಬಗ್ಗೆಯೂ ಬಿಲ್ಡರ್ಗಳ ಜೊತೆ ಚರ್ಚೆ ನಡೆಸಲಾಯಿತು’ ಎಂದರು.