ದರೂರು (ಅಥಣಿ): ‘ಎನ್ಡಿಆರ್ಎಫ್ ನಿಯಮಾವಳಿ ಪರಿಷ್ಕರಿಸಿ, ಬದಲಿಸಬೇಕು ಎಂದು ಪ್ರಧಾನಿ ನರೇಂದ್ರ
ಮೋದಿ ಅವರಿಗೆ ಮನವಿ ಸಲ್ಲಿಸಲಿದ್ದೇವೆ. ಈ ನಿಯಮಾವಳಿಯ ಪ್ರಕಾರ ಬೆಳೆಹಾನಿಗೆ ಪ್ರತಿ ಹೆಕ್ಟೇರ್ಗೆ ಗರಿಷ್ಠ ₹13,500 ಮಾತ್ರ ಪರಿಹಾರ ನೀಡಲು ಅವಕಾಶವಿದೆ. ಇದು ನಮ್ಮ ರಾಜ್ಯದ ಸಮಸ್ಯೆಯಷ್ಟೇ ಅಲ್ಲ. ಅಗತ್ಯ ಬಿದ್ದರೆ ಸಚಿವರ ನಿಯೋಗದೊಂದಿಗೆ ಹೋಗಿ, ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.