ಬಿಜೆಪಿ ಝೀರೊ ಎಂದು ಹೇಳಿದ್ದನ್ನು ಆಕ್ಷೇಪಿಸಿದ ಬಿಜೆಪಿಯ ಎಂ.ಕೆ. ಪ್ರಾಣೇಶ್ ಹಾಗೂ ತೇಜಸ್ವಿನಿ ಗೌಡ, ‘ನಿಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಹೀರೊ. ಅವರನ್ನು ನಿರ್ಲಕ್ಷ್ಯ ಮಾಡಿದ್ದರಿಂದಲೇ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಕಾಂಗ್ರೆಸ್ ಝೀರೊ ಆಯಿತು ಎಂದು ಕೆಣಕಿದರು. ಆಗ ಕಾಂಗ್ರೆಸ್–ಬಿಜೆಪಿ ಸದಸ್ಯರ ಮಧ್ಯೆ ಮಾತಿಗೆ ಮಾತು ಬೆಳೆಯಿತು.