ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವೀಯತೆಯಿಂದ ನಡೆದುಕೊಳ್ಳಿ: ಬಿಎಸ್‌ವೈ

Last Updated 30 ಜೂನ್ 2020, 19:39 IST
ಅಕ್ಷರ ಗಾತ್ರ

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಅಂತ್ಯ ಸಂಸ್ಕಾರದ ವೇಳೆ ಸಿಬ್ಬಂದಿ ನಡೆದುಕೊಂಡ ರೀತಿ ಅತ್ಯಂತ ಅಮಾನವೀಯ ಹಾಗೂ ತೀವ್ರ ನೋವಿನ ಸಂಗತಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ‘ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ’ ಎಂದಿದ್ದಾರೆ. ಸೋಂಕಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ, ಮೃತರ ಅಂತ್ಯ ಸಂಸ್ಕಾರವನ್ನು ಗೌರವದಿಂದ ನೆರವೇರಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಿಬ್ಬಂದಿ ಅಮಾನತು: ಮೃತರ ಅಂತ್ಯ ಸಂಸ್ಕಾರದ ವೇಳೆ ಅಮಾನವೀಯವಾಗಿ ನಡೆದುಕೊಂಡ ಸಿಬ್ಬಂದಿಯನ್ನು ಅಮಾ
ನತು ಮಾಡಿದ್ದೇವೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಇದು ಅಮಾನವೀಯ ಮತ್ತು ಖಂಡನೀಯ ಘಟನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT