ಕಲಬುರ್ಗಿ: ‘ಮಲ್ಲಿಕಾರ್ಜುನ ಖರ್ಗೆ ಎಂದೋ ಮುಖ್ಯಮಂತ್ರಿ ಆಗಬೇಕಿತ್ತು’ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಹೇಳಿಕೆಗೆ ಬುಧವಾರ ಇಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ‘ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ. ನಾಳೆಯೇ ರಾಜೀನಾಮೆ ನೀಡಿ ತಮ್ಮ ಕನಸು ನನಸಾಗಿಸಿಕೊಳ್ಳಲಿ’ ಎಂದು ಸವಾಲು ಹಾಕಿದರು.