ಮಹೇಶ್ ಅವರು ಪಕ್ಷದಿಂದ ವಿಧಾನಸಭೆಗೆ ಆಯ್ಕೆಯಾಗಿ ನಂತರ ಸಚಿವರಾಗಿದ್ದು, ರಾಜ್ಯದ ಬಿಎಸ್ಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕಲ್ಲದೆ, ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.