ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಸಿರು ನಿಶಾನೆ ಸಿಕ್ಕರೆ ಸಂಪುಟಕ್ಕೆ’

Last Updated 15 ಡಿಸೆಂಬರ್ 2018, 20:00 IST
ಅಕ್ಷರ ಗಾತ್ರ

ಬೆಂಗಳೂರು:‘ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನನ್ನನ್ನು ಪರಿಗಣಿಸಿದರೆ ಸಚಿವ ಸಂಪುಟ ಸೇರಲು ಸಿದ್ಧ’ ಎಂದು ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ಹೇಳಿದರು.

ಕಾಂಗ್ರೆಸ್‌– ಜೆಡಿಎಸ್‌ ಮೈತ್ರಿ ಸರ್ಕಾರ ರಚನೆ ಆದಾಗ ಜೆಡಿಎಸ್‌ ಕೋಟದಲ್ಲಿ ಮಹೇಶ್‌ ಸಚಿವರಾದರು. ಪಕ್ಷದ ನಾಯಕಿ ಮಾಯಾವತಿ ಸೂಚನೆ ಮೇರೆಗೆ ಬಳಿಕ ರಾಜೀನಾಮೆ ನೀಡಿದರು. ಇದೀಗ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಬಿಎಸ್‌ಪಿ ಬೆಂಬಲ ವ್ಯಕ್ತಪಡಿಸಿರುವ ಬೆನ್ನಲ್ಲೇ ಮಹೇಶ್‌ ಸಂಪುಟ ಸೇರುವ ಆಸಕ್ತಿ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಚಿವನಾಗಿದ್ದ ಸಂದರ್ಭದಲ್ಲಿ ಪಕ್ಷದ ಸೂಚನೆಯಂತೆ ನಡೆದುಕೊಂಡಿದ್ದೇನೆ. ಈಗ ಮಾಯಾವತಿ ಅವರು ಸಂಪುಟ ಸೇರಲು ಹಸಿರು ನಿಶಾನೆ ನೀಡಿದರೆ, ಸಂಪುಟ ಸೇರುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT