ಉಡುಪಿ:ಉಗ್ರರ ನೆಲೆಗಳ ಮೇಲಿನ ದಾಳಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನೆರವಾಗಲಿದೆ ಎಂಬ ಯಡಿಯೂರಪ್ಪ ಹೇಳಿಕೆ ದೊಡ್ಡ ವಿಷಯವಲ್ಲ. ಇಂದಿರಾಗಾಂಧಿ ಅಧಿಕಾರಾವಧಿಯಲ್ಲೂ ಯುದ್ಧ ನಡೆದಾಗ ಕಾಂಗ್ರೆಸ್ಗೆ ಹೆಚ್ಚು ಲಾಭ ಆಗುತ್ತದೆ ಎಂದೇ ಹೇಳಲಾಗಿತ್ತು. ಹಾಗಾಗಿ, ಬಿಎಸ್ವೈ ಹೇಳಿಕೆಯನ್ನು ದೊಡ್ಡದು ಮಾಡಬೇಕಿಲ್ಲ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಅಭಿಪ್ರಾಯಪಟ್ಟರು.