ರಾಜೀನಾಮೆ ಸ್ವೀಕರಿಸದೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ಸ್ಪೀಕರ್ ಆದೇಶದ ಸಿಂಧುತ್ವ ಪ್ರಶ್ನಿಸಿ 17 ಜನ ಅನರ್ಹರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ನಡೆ
ಯಲಿದ್ದು, ಅನರ್ಹರಿಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದರು. ಉಪ ಚುನಾವಣೆ ಘೋಷಣೆಯಿಂದ ಆಘಾತವಾಗಿದೆ. ಈ ವಿಷಯ ತಿಳಿದು ಅಮಿತ್ ಶಾ ಅವರೂ ಆಘಾತಕ್ಕೊಳಗಾದರು. ಈ ಬಗ್ಗೆ ಅನರ್ಹರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.