‘ಆ ನಾಯಕರು ಸಚಿವ ಸ್ಥಾನ ಕೊಡುತ್ತೇವೆಂದು ಹೇಳಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ಹಣ ವಾಪಸ್ ಪಡೆಯುವಂತೆ ಸಾಕಷ್ಟು ಬಾರಿ ಹೇಳಿದರೂ ಅವರ್ಯಾರು ಬರಲಿಲ್ಲ. ಕಾನೂನು ಕ್ರಮಕ್ಕೆ ಮುಂದಾಗುವಾಗಷ್ಟರಲ್ಲಿ ಯೋಗೀಶ್ವರ್ ಹಣ ಹಿಂಪಡೆದರು. ಬಿಜೆಪಿಗೆ ಹೋಗುವ ಆಸೆ ಇದ್ದಿದ್ದರೆ ₹ 25 ಕೋಟಿ ಪಡೆಯುತ್ತಿದ್ದೆ. ಆದರೆ, ಅಂತಹ ಕೆಲಸಕ್ಕೆ ಮುಂದಾಗಿಲ್ಲ’ ಎಂದು ಸ್ಪಷ್ಟಪಡಿಸಿದರು.