<p>ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸರ್ಕಾರದ ಭವಿಷ್ಯ ನಿರ್ಧರಿಸುವ 15 ಕ್ಷೇತ್ರಗಳ ಉಪ ಚುನಾವಣೆಯ ಮತದಾನ ಆರಂಭವಾದ ಕ್ಷಣದಿಂದ ಕೊನೆಯವರೆಗೆ ಪ್ರತಿಯೊಂದು ಕ್ಷೇತ್ರದ ಮೇಲೂ ಹದ್ದಿನ ಕಣ್ಣಿಟ್ಟು, ಪಕ್ಷದ ನಾಯಕರಿಗೆ ಸಲಹೆ ಸೂಚನೆಗಳನ್ನು ನೀಡಿದರು.</p>.<p>ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲೇ ಇದ್ದು, ನಿಯಂತ್ರಣ ಕೊಠಡಿ ಮಾದರಿಯಲ್ಲಿ ಕಾರ್ಯ ನಿರ್ವಹಿಸಿದರು. ಮಾಧ್ಯಮಗಳಲ್ಲಿ ಬರುತ್ತಿದ್ದ ಮಾಹಿತಿಯಲ್ಲದೇ, ಆಪ್ತರಿಂದಲೂ ಮಾಹಿತಿ ತರಿಸಿಕೊಂಡು ಅದಕ್ಕೆ ತಕ್ಕಂತೆ ಮುಂದೇನು ಮಾಡಬೇಕು ಎಂಬ ಬಗ್ಗೆ ನಿರ್ದೇಶನ ನೀಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಮಧ್ಯಾಹ್ನದವರೆಗೆ ಮತದಾನದ ನೀರಸವಾಗಿದ್ದ ಕಾರಣ ಯಡಿಯೂರಪ್ಪ ಕೊಂಚ ಆತಂಕ ಮತ್ತು ನಿರಾಸೆಗೂ ಒಳಗಾದರು. ಬಳಿಕ ಎಲ್ಲ ಕ್ಷೇತ್ರಗಳಿಗೆ ನಿಯೋಜಿಸಲಾಗಿದ್ದ ಉಸ್ತುವಾರಿ ಸಚಿವರ ಜತೆ ಮಾತನಾಡಿ, ಮತದಾರರು ಕಡ್ಡಾಯವಾಗಿ ಬಂದು ಪಕ್ಷಕ್ಕೆ ಮತ ಚಲಾಯಿಸುವಂತೆ ಮನವೊಲಿಸಲು ತಾಕೀತು ಮಾಡಿದರು. ಆ ಪ್ರಕಾರ ಬೂತ್ ಮಟ್ಟದ ಕಾರ್ಯಕರ್ತರು ಪಕ್ಷದ ಮತದಾರರ ಮನೆಗಳಿಗೆ ತೆರಳಿ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.</p>.<p>ಯಡಿಯೂರಪ್ಪ ಅವರು ಸಂಜೆ 6 ರವರೆಗೆ ಮನೆಯಲ್ಲೇ, ಕೆಲವು ತಮ್ಮ ಆಪ್ತ ಶಾಸಕರು ಮತ್ತು ಸಚಿವರ ಜತೆಗೆ ಉಳಿದರು. ಮಧ್ಯಾಹ್ನದ ಬಳಿಕ ಮತದಾನದ ಪ್ರಮಾಣ ಚುರುಕಾದ ಬಳಿಕ ಕೊಂಚ ನಿರಾಳರಾದರು ಎಂದೂ ಮೂಲಗಳು ಹೇಳಿವೆ.</p>.<p>ಬುಧವಾರವೂ ಮನೆಯಲ್ಲೇ ಉಳಿದು ಯಡಿಯೂರಪ್ಪ ಕಾರ್ಯತಂತ್ರ ಹೆಣೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸರ್ಕಾರದ ಭವಿಷ್ಯ ನಿರ್ಧರಿಸುವ 15 ಕ್ಷೇತ್ರಗಳ ಉಪ ಚುನಾವಣೆಯ ಮತದಾನ ಆರಂಭವಾದ ಕ್ಷಣದಿಂದ ಕೊನೆಯವರೆಗೆ ಪ್ರತಿಯೊಂದು ಕ್ಷೇತ್ರದ ಮೇಲೂ ಹದ್ದಿನ ಕಣ್ಣಿಟ್ಟು, ಪಕ್ಷದ ನಾಯಕರಿಗೆ ಸಲಹೆ ಸೂಚನೆಗಳನ್ನು ನೀಡಿದರು.</p>.<p>ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲೇ ಇದ್ದು, ನಿಯಂತ್ರಣ ಕೊಠಡಿ ಮಾದರಿಯಲ್ಲಿ ಕಾರ್ಯ ನಿರ್ವಹಿಸಿದರು. ಮಾಧ್ಯಮಗಳಲ್ಲಿ ಬರುತ್ತಿದ್ದ ಮಾಹಿತಿಯಲ್ಲದೇ, ಆಪ್ತರಿಂದಲೂ ಮಾಹಿತಿ ತರಿಸಿಕೊಂಡು ಅದಕ್ಕೆ ತಕ್ಕಂತೆ ಮುಂದೇನು ಮಾಡಬೇಕು ಎಂಬ ಬಗ್ಗೆ ನಿರ್ದೇಶನ ನೀಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಮಧ್ಯಾಹ್ನದವರೆಗೆ ಮತದಾನದ ನೀರಸವಾಗಿದ್ದ ಕಾರಣ ಯಡಿಯೂರಪ್ಪ ಕೊಂಚ ಆತಂಕ ಮತ್ತು ನಿರಾಸೆಗೂ ಒಳಗಾದರು. ಬಳಿಕ ಎಲ್ಲ ಕ್ಷೇತ್ರಗಳಿಗೆ ನಿಯೋಜಿಸಲಾಗಿದ್ದ ಉಸ್ತುವಾರಿ ಸಚಿವರ ಜತೆ ಮಾತನಾಡಿ, ಮತದಾರರು ಕಡ್ಡಾಯವಾಗಿ ಬಂದು ಪಕ್ಷಕ್ಕೆ ಮತ ಚಲಾಯಿಸುವಂತೆ ಮನವೊಲಿಸಲು ತಾಕೀತು ಮಾಡಿದರು. ಆ ಪ್ರಕಾರ ಬೂತ್ ಮಟ್ಟದ ಕಾರ್ಯಕರ್ತರು ಪಕ್ಷದ ಮತದಾರರ ಮನೆಗಳಿಗೆ ತೆರಳಿ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.</p>.<p>ಯಡಿಯೂರಪ್ಪ ಅವರು ಸಂಜೆ 6 ರವರೆಗೆ ಮನೆಯಲ್ಲೇ, ಕೆಲವು ತಮ್ಮ ಆಪ್ತ ಶಾಸಕರು ಮತ್ತು ಸಚಿವರ ಜತೆಗೆ ಉಳಿದರು. ಮಧ್ಯಾಹ್ನದ ಬಳಿಕ ಮತದಾನದ ಪ್ರಮಾಣ ಚುರುಕಾದ ಬಳಿಕ ಕೊಂಚ ನಿರಾಳರಾದರು ಎಂದೂ ಮೂಲಗಳು ಹೇಳಿವೆ.</p>.<p>ಬುಧವಾರವೂ ಮನೆಯಲ್ಲೇ ಉಳಿದು ಯಡಿಯೂರಪ್ಪ ಕಾರ್ಯತಂತ್ರ ಹೆಣೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>