ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಸ್ಥಾನ ಕುರಿತು ಬಿಎಸ್‌ವೈ ನೀಡಿದ್ದ ಭರವಸೆ ಈಡೇರಿಸಲಿ; ರಮೇಶ ಕತ್ತಿ

Last Updated 30 ಮೇ 2020, 10:27 IST
ಅಕ್ಷರ ಗಾತ್ರ

ಬೆಳಗಾವಿ: ‘ನನಗೆ ಕಳೆದ ವರ್ಷ ಲೋಕಸಭಾ ಟಿಕೆಟ್‌ ತಪ್ಪಿದ ವೇಳೆ ಸಂಧಾನ ಮಾಡಲು ಬಂದಿದ್ದಾಗ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ರಾಜ್ಯಸಭಾ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆ ಭರವಸೆಯನ್ನು ಈಡೇರಿಸಿಕೊಡಿ ಎಂದು ಕೇಳಿದ್ದೇನೆ’ ಎಂದು ರಮೇಶ ಕತ್ತಿ ಹೇಳಿದರು.

ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯಸಭಾ ಸ್ಥಾನ ತೆರವುಗೊಳ್ಳುತ್ತಿದ್ದು, ಸದ್ಯದಲ್ಲಿಯೇ ಚುನಾವಣೆ ನಡೆಯಲಿದೆ. ಈ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಕು. ಈಗಾಗಲೇ ಅವರು ಭರವಸೆ ನೀಡಿದ್ದರ ಮೇರೆಗೆ ನಾವು ಹೋಗಿ ಕೇಳಿದ್ದೇವೆ’ ಎಂದು ಹೇಳಿದರು.

‘ಅಣ್ಣ ಉಮೇಶ ಕತ್ತಿ ವಜ್ರ ಇದ್ದಂತೆ. ಅವರಿಗೆ ಅವರದ್ದೇ ಆದ ಸಾಮರ್ಥ್ಯವಿದೆ. ಇವತ್ತಿಲ್ಲ ನಾಳೆ, ಅಥವಾ ಒಂದು ವರ್ಷ ಬಿಟ್ಟಾದರೂ ಅವರು ಸಚಿವರಾಗುತ್ತಾರೆ. ಅದರಲ್ಲಿ ಎರಡು ಮಾತಿಲ್ಲ. ಆದರೆ, ನನ್ನ ರಾಜಕೀಯ ಭವಿಷ್ಯವೇನು? ಲೋಕಸಭಾ ಟಿಕೆಟ್‌ ಕೈ ತಪ್ಪಿ ಹೋಗಿದೆ. ಯಾಕೆ ತಪ್ಪಿತು ಎನ್ನುವುದನ್ನು ಯಾರೂ ಹೇಳುತ್ತಿಲ್ಲ’ ಎಂದರು.

‘ಲಾಕ್‌ಡೌನ್‌ದಿಂದಾಗಿ ಉತ್ತರ ಕರ್ನಾಟಕದ ಶಾಸಕರ ಜೊತೆ ಬಹಳ ದಿನಗಳಿಂದ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಮೊನ್ನೆ ಅಣ್ಣ ಉಮೇಶ ಕತ್ತಿ ಅವರಿಗಾಗಿ ಊಟಕ್ಕೆ ವ್ಯವಸ್ಥೆ ಮಾಡಿದ್ದರು. ಈ ಔತಣಕೂಟಕ್ಕೆ ಯಡಿಯೂರಪ್ಪ ಅವರನ್ನೂ ಕರೆದಿದ್ದೇವು’ ಎಂದು ನುಡಿದರು.

‘ಪಕ್ಷದ ಶಿಸ್ತಿನ ಸಿಪಾಯಿಯಾಗಿ ಅದೇ ಪಕ್ಷದಲ್ಲಿ ಮುಂದುವರಿಯುತ್ತೇವೆ. ಹೈಕಮಾಂಡ್‌ ಹಾಗೂ ಮುಖ್ಯಮಂತ್ರಿ ಅವರು ತೆಗೆದುಕೊಳ್ಳುವ ನಿರ್ಣಯವನ್ನು ಸ್ವೀಕರಿಸುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT