<p><strong>ಬೆಂಗಳೂರು:</strong> ರಾಜ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಇನ್ನು ಮೂರು– ನಾಲ್ಕು ದಿನಗಳಲ್ಲಿ ಮಾಹಿತಿ ನೀಡುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆಯ ಬಳಿ ಮಾತನಾಡಿದ ಅವರು, ಪಕ್ಷದ ರಾಜ್ಯ ಉಸ್ತುವಾರಿ ಮುರುಳೀಧರರಾವ್ ಅವರು ಬಂದಿದ್ದು, ರಾಜಕೀಯ ಬೆಳವಣಿಗೆಗಳ ಬಗ್ಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದರು.</p>.<p>ವಿಧಾನಸೌಧದಲ್ಲಿ ಸಚಿವ ಎಂ.ಟಿ.ಬಿ.ನಾಗರಾಜ್ ಮತ್ತು ಶಾಸಕ ಸುಧಾಕರ್ ಅವರ ಮೇಲೆ ಹಲ್ಲೆ ನಡೆಸಲಾಯಿತು. ಕಾಂಗ್ರೆಸ್ ಶಾಸಕರು ಮತ್ತು ಸಚಿವರೊಬ್ಬರು ಸೇರಿ ಸುಧಾಕರ್ ಅವರ ಕೊರಳಪಟ್ಟಿ ಹಿಡಿದು ಎಳೆದಾಡಿ, ಸಚಿವ ಜಾರ್ಜ್ ಕೊಠಡಿಯಲ್ಲಿ ಕೂಡಿ ಹಾಕಿದರು. ಈ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಗೂಂಡಾ ಸಂಸ್ಕೃತಿ ಇಡೀ ಜಗತ್ತಿಗೇ ಗೊತ್ತಾಗಿದೆ ಎಂದು ಅವರು ಹೇಳಿದರು.</p>.<p>‘ವಿಧಾನಸಭಾಧ್ಯಕ್ಷರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆ ಕಾಲ ಚರ್ಚಿಸಿದೆವು. ರಾಜೀನಾಮೆಯನ್ನು ವಿಳಂಬ ಮಾಡುವುದು ಸರಿಯಲ್ಲ. ತಕ್ಷಣವೇ ರಾಜೀನಾಮೆ ಅಂಗೀಕರಿಸಬೇಕೆಂದು ಅವರಿಗೆ ಮನವಿ ಮಾಡಿದ್ದೇವೆ’ ಎಂದೂ ಯಡಿಯೂರಪ್ಪ ತಿಳಿಸಿದರು.</p>.<p>ಮೈತ್ರಿ ಸರ್ಕಾರ ಕೊನೇ ಹಂತಕ್ಕೆ ಬಂದು ನಿಂತಿದೆ. ಮುಂದೆ ಏನು ಆಗುತ್ತದೆಯೋ ಕಾದು ನೋಡೋಣ. ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಇನ್ನು ಮೂರು– ನಾಲ್ಕು ದಿನಗಳಲ್ಲಿ ಮಾಹಿತಿ ನೀಡುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆಯ ಬಳಿ ಮಾತನಾಡಿದ ಅವರು, ಪಕ್ಷದ ರಾಜ್ಯ ಉಸ್ತುವಾರಿ ಮುರುಳೀಧರರಾವ್ ಅವರು ಬಂದಿದ್ದು, ರಾಜಕೀಯ ಬೆಳವಣಿಗೆಗಳ ಬಗ್ಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದರು.</p>.<p>ವಿಧಾನಸೌಧದಲ್ಲಿ ಸಚಿವ ಎಂ.ಟಿ.ಬಿ.ನಾಗರಾಜ್ ಮತ್ತು ಶಾಸಕ ಸುಧಾಕರ್ ಅವರ ಮೇಲೆ ಹಲ್ಲೆ ನಡೆಸಲಾಯಿತು. ಕಾಂಗ್ರೆಸ್ ಶಾಸಕರು ಮತ್ತು ಸಚಿವರೊಬ್ಬರು ಸೇರಿ ಸುಧಾಕರ್ ಅವರ ಕೊರಳಪಟ್ಟಿ ಹಿಡಿದು ಎಳೆದಾಡಿ, ಸಚಿವ ಜಾರ್ಜ್ ಕೊಠಡಿಯಲ್ಲಿ ಕೂಡಿ ಹಾಕಿದರು. ಈ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಗೂಂಡಾ ಸಂಸ್ಕೃತಿ ಇಡೀ ಜಗತ್ತಿಗೇ ಗೊತ್ತಾಗಿದೆ ಎಂದು ಅವರು ಹೇಳಿದರು.</p>.<p>‘ವಿಧಾನಸಭಾಧ್ಯಕ್ಷರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆ ಕಾಲ ಚರ್ಚಿಸಿದೆವು. ರಾಜೀನಾಮೆಯನ್ನು ವಿಳಂಬ ಮಾಡುವುದು ಸರಿಯಲ್ಲ. ತಕ್ಷಣವೇ ರಾಜೀನಾಮೆ ಅಂಗೀಕರಿಸಬೇಕೆಂದು ಅವರಿಗೆ ಮನವಿ ಮಾಡಿದ್ದೇವೆ’ ಎಂದೂ ಯಡಿಯೂರಪ್ಪ ತಿಳಿಸಿದರು.</p>.<p>ಮೈತ್ರಿ ಸರ್ಕಾರ ಕೊನೇ ಹಂತಕ್ಕೆ ಬಂದು ನಿಂತಿದೆ. ಮುಂದೆ ಏನು ಆಗುತ್ತದೆಯೋ ಕಾದು ನೋಡೋಣ. ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>