ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಟಿಕೆಟ್ ಹಂಚಿಕೆ ನನ್ನ ತೀರ್ಮಾನ ಅಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನ. ಇದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಪಕ್ಷದ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಗೆಲ್ಲಿಸಲು ಒಗ್ಗಟ್ಟಾಗಿ ಪ್ರಯತ್ನಿಸುತ್ತೇವೆ. ರಮೇಶ ಅವರಿಗೆ ಯಾವುದೇ ಅಸಮಾಧಾನ ಇಲ್ಲ’ ಎಂದರು.
‘ಟಿಕೆಟ್ ಬದಲಿಗೆ ರಮೇಶ ಅವರು ಯಾವುದೇ ಬೇಡಿಕೆ ಇಲ್ಲ. ಆದರೂ, ಅವರಿಗೆ ಪಕ್ಷವು ಸೂಕ್ತ ಸಮಯದಲ್ಲಿ ಸೂಕ್ತ ಸ್ಥಾನಮಾನ ನೀಡಲಿದೆ’ ಎಂದು ಹೇಳಿದರು.