‘ರಾಜ್ಯ ಸರ್ಕಾರ ₹ 2 ಲಕ್ಷ ಕೋಟಿ ಗಾತ್ರದ ಬಜೆಟ್ ರೂಪಿಸಿದೆ. ತೆರಿಗೆ ಹಣ, ಕಂದಾಯ ಕಾಲಕಾಲಕ್ಕೆ ಬೊಕ್ಕಸ ಸೇರುತ್ತಿದೆ. ಆದರೂ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ನೀರಾವರಿ ಯೋಜನೆಗಳು ಸಂಪೂರ್ಣ ನನೆಗುದಿಗೆ ಬಿದ್ದಿವೆ. ಹಣ ಎಲ್ಲಿಗೆ ಹೋಗುತ್ತಿದೆ ಎಂಬುದು ಯಕ್ಷಪ್ರಶ್ನೆಯಾಗಿ ಉಳಿದಿದೆ. ಮುಖ್ಯಮಂತ್ರಿ ಮಾತ್ರ ಉಡಾಫೆ ಉತ್ತರ ನೀಡುತ್ತ ಕಾಲಾಹರಣ ಮಾಡುತ್ತಿದ್ದಾರೆ. ಸರ್ಕಾರ ವೈಫಲ್ಯದ ವಿರುದ್ಧ ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲಿದೆ’ ಎಂದು ಹೇಳಿದರು.