ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್: ಪರಿಶಿಷ್ಟ ವರ್ಗಕ್ಕೆ ಭರ್ಜರಿ ಕೊಡುಗೆ

ಎಸ್‌ಸಿ, ಎಸ್‌ಟಿ ವಿಶೇಷ ಘಟಕ ಯೋಜನೆಗೆ ₹ 30,445 ಕೋಟಿ
Last Updated 8 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟರು ಹಾಗೂ ಹಿಂದುಳಿದವರ ಕಲ್ಯಾಣಕ್ಕೆ ಹೆಚ್ಚು ಅನುದಾನ ಒದಗಿಸುವ ಮೂಲಕ ಮುಖ್ಯಮಂತ್ರಿ ಇವೆರಡೂ ವರ್ಗಗಳನ್ನು ಓಲೈಸುವ ಪ್ರಯತ್ನ ಮಾಡಿದ್ದಾರೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಗೆ ₹ 30,445 ಕೋಟಿ ಒದಗಿಸಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿಗೆ ₹ 134 ಕೋಟಿ ತೆಗೆದಿರಿಸಿದ್ದಾರೆ. ಸವಿತಾ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಪ್ರಕಟಿಸಿದ್ದಾರೆ.

ನಿರ್ದಿಷ್ಟ ಸಮುದಾಯಗಳಿಗೆ ಈ ಅನುದಾನವನ್ನು ನೇರವಾಗಿ ತಲುಪಿಸಲು ಒಬ್ಬರು ನೋಡಲ್‌ ಅಧಿಕಾರಿ ಮತ್ತು ನಾಲ್ವರು ಸದಸ್ಯರನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದೆ. ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ ಮತ್ತು ಸಾಮಾನ್ಯ ವಿದ್ಯಾರ್ಥಿಗಳಿಗಾಗಿ 30 ಸಂಯುಕ್ತ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಲು ₹ 100 ಕೋಟಿ ಮೀಸಲಿಡಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 100 ವಸತಿ ಶಾಲೆಗಳಲ್ಲಿ ಪಿಯುಸಿ (ವಿಜ್ಞಾನ ಹಾಗೂ ವಾಣಿಜ್ಯ ಕೋರ್ಸ್‌) ತರಗತಿ ಆರಂಭಿಸುವ ಮೂಲಕ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ. ವಿಭಾಗ ಮಟ್ಟದಲ್ಲಿ ನಾಲ್ಕು ಮೊರಾರ್ಜಿ ಪದವಿ ಪೂರ್ವ ಕಾಲೇಜುಗಳಲ್ಲಿ ಐಐಟಿ ಮತ್ತು ನೀಟ್‌ ಪರೀಕ್ಷಾ ತರಬೇತಿ ಕೇಂದ್ರ ಸ್ಥಾ‍‍ಪಿಸಲು ₹ 4 ಕೋಟಿ ನೀಡಲು ಉದ್ದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT