ಬೆಂಗಳೂರು:ಕೆರೆಗಳ ಅಭಿವೃದ್ಧಿ ಜೊತೆಗೆ, ಸಣ್ಣ ನೀರಾವರಿ ಪುನಶ್ವೇತನಕ್ಕೆ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಪಾಂಡವಪುರ ತಾಲ್ಲೂಕಿನ ಬಳಘಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ₹100 ಕೋಟಿ ನೀಡಲಾಗಿದೆ. ಇದಲ್ಲದೆ, ಮುಂದಿನ ಮೂರು ವರ್ಷಗಳಲ್ಲಿ ₹300 ಕೋಟಿ ವೆಚ್ಚದಲ್ಲಿ ಬೀದರ್ ಜಿಲ್ಲೆಯ ಎಲ್ಲ ಕೆರೆಗಳ ಸುಧಾರಣೆಗೆ ಕ್ರಮ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.