ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿ ಬಜೆಟ್‌ಗೆ ಇವರು ಹೀಗೆ ಪ್ರತಿಕ್ರಿಯಿಸಿದರು...

Last Updated 8 ಫೆಬ್ರುವರಿ 2019, 13:10 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ ಕುರಿತಂತೆ ಆಡಳಿತ ಪಕ್ಷಗಳು ಪರಿಪೂರ್ಣ ಬಜೆಟ್‌ ಎಂದು ಬಣ್ಣಿಸಿದರೆ, ವಿರೋಧ ಪಕ್ಷ ಇದು ಶೂನ್ಯ ಬಜೆಟ್‌ ಎಂದು ಹೇಳಿದೆ.

ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಒಟ್ಟಾರೆ ಈ ಬಜೆಟ್‌ ಪರಿಪೂರ್ಣವಾಗಿದೆ ಎಂದು ಹೇಳಿದ್ದಾರೆ. ಈ ಬಜೆಟ್‌ ಎರಡು ಪಕ್ಷಗಳ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಒಳಗೊಂಡಿದ್ದು ನಮ್ಮ ಹಿಂದಿನ ಯೋಜನೆಗಳನ್ನು ಮುಂದುವರೆಸಲಾಗಿದೆ. ಇದು ಸ್ವಾಗತಾರ್ಹ ಬಜೆಟ್‌ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಕ್ರಾಂತಿ ಬಜೆಟ್‌ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದರು ಆದರೆ ಈ ಬಜೆಟ್‌ನಲ್ಲಿ ಏನು ಇಲ್ಲ, ಕೇವಲ ಹಾಸನಕ್ಕೆ ಸೀಮಿತವಾಗಿದ್ದು ಈ ಬಜೆಟ್‌ ಮೇಲೆ ರೇವಣ್ಣ ಅವರ ಪ್ರಭಾವ ಹೆಚ್ಚಾಗಿದೆ. ಇದು ಡೋಂಗಿ ಬಜೆಟ್‌ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT