ಫೆ.6ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ದರು. 8ರಂದು ಬಜೆಟ್ ಮಂಡನೆಯಾಗಿತ್ತು. ಅಷ್ಟರಲ್ಲಿ, ‘ಆಪರೇಷನ್ ಆಡಿಯೊ’ ಬಯಲಾಗಿತ್ತು.ಎಸ್ಐಟಿ ರಚನೆಯ ಪರ–ವಿರೋಧದ ಗಲಾಟೆಯಿಂದ ಸುಗಮ ಕಲಾಪ ನಡೆದಿಲ್ಲ.ರಾಜ್ಯಪಾಲರ ಭಾಷಣ ಮತ್ತು ಬಜೆಟ್ ಕುರಿತು ಚರ್ಚೆಯೂ ಆಗಿಲ್ಲ.ಹೀಗಾಗಿ, ಸರ್ಕಾರ ಉತ್ತರ ಕೊಡುವ ಪ್ರಮೇಯವೂ ಇಲ್ಲ ಎನ್ನಲಾಗಿದೆ.