ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO| ಶಾಸಕ ರೇಣುಕಾಚಾರ್ಯಗೆ ಹೋರಿ ತಿವಿತ!

Last Updated 1 ನವೆಂಬರ್ 2019, 12:31 IST
ಅಕ್ಷರ ಗಾತ್ರ

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ದೊಡ್ಡೇರಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಹೋರಿ ತಿವಿದ ಪರಿಣಾಮ ಸಣ್ಣಪುಟ್ಟ ಗಾಯಗಳಾಗಿವೆ.

ದೀಪಾವಳಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗ್ರಾಮಸ್ಥರು ರೇಣುಕಾಚಾರ್ಯ ಅವರನ್ನು ಹೆಗಲ ಮೇಲೆ ಎತ್ತಿಕೊಂಡು ಮೆರವಣಿಗೆ ಮಾಡುತ್ತಿದ್ದಾಗ ಎದುರಿನಿಂದ ಏಕಾಏಕಿ ಓಡಿಬಂದ ಹೋರಿ ಜನರತ್ತ ನುಗ್ಗಿ ಬಂದಿದೆ. ಆಗ ರೇಣುಕಾಚಾರ್ಯ ಸೇರಿ ಕೆಲವರು ನೆಲಕ್ಕೆ ಕುಸಿದು ಬಿದ್ದಿದ್ದಾರೆ. ಈ ವೇಳೆ ಅವರ ಎಡಗೈ ಹಾಗೂ ಎಡಕಾಲಿಗೆ ತರಚಿದ ಗಾಯಗಳಾಗಿವೆ.

ಹೋರಿ ಓಡಿಸುವ ಹಬ್ಬದಲ್ಲಿ ಹೋರಿಗಳಲ್ಲೆ ಓಡಿ ಹೋದವು ಎಂದು ತಿಳಿದುಕೊಂಡು ಗ್ರಾಮಸ್ಥರು ವಿಜಯೋತ್ಸವ ಆಚರಿಸುತ್ತಿದ್ದರು. ರೇಣುಕಾಚಾರ್ಯ ಅವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆಯಲ್ಲಿ ಬರುತ್ತಿದ್ದಾಗ ಒಂದು ಹೋರಿ ಜನರತ್ತ ನುಗ್ಗಿ ಬಂದಿದೆ. ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT