ದೀಪಾವಳಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗ್ರಾಮಸ್ಥರು ರೇಣುಕಾಚಾರ್ಯ ಅವರನ್ನು ಹೆಗಲ ಮೇಲೆ ಎತ್ತಿಕೊಂಡು ಮೆರವಣಿಗೆ ಮಾಡುತ್ತಿದ್ದಾಗ ಎದುರಿನಿಂದ ಏಕಾಏಕಿ ಓಡಿಬಂದ ಹೋರಿ ಜನರತ್ತ ನುಗ್ಗಿ ಬಂದಿದೆ. ಆಗ ರೇಣುಕಾಚಾರ್ಯ ಸೇರಿ ಕೆಲವರು ನೆಲಕ್ಕೆ ಕುಸಿದು ಬಿದ್ದಿದ್ದಾರೆ. ಈ ವೇಳೆ ಅವರ ಎಡಗೈ ಹಾಗೂ ಎಡಕಾಲಿಗೆ ತರಚಿದ ಗಾಯಗಳಾಗಿವೆ.