ಕೂಡ್ಲಿಗಿ: ತಾಲ್ಲೂಕಿನ ಮೊರಬ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭಾನುವಾರ ತಡ ರಾತ್ರಿ ಖಾಸಗಿ ಹಾಗೂ ಸರ್ಕಾರಿ ಬಸ್ ಮಧ್ಯೆ ಡಿಕ್ಕಿಯಾಗಿ ಒಬ್ಬ ಚಾಲಕ ಮೃತಪಟ್ಟು, 23ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಮಲ್ಲಿಕಾರ್ಜುನ ಡಿ. ಪಾಟೀಲ್(50) ಮೃತ ಚಾಲಕ ಎಂದು ಹೇಳಲಾಗಿದೆ.
ಹೊಸಪೇಟೆಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ನ ಚಾಲಕ ಕದಂವಿಶಾಲ್ ಅತಿವೇಗ ಹಾಗೂ ಅಜಾಗರೂಕತೆಯಿದ ಚಾಲನೆ ಮಾಡಿಕೊಂಡು ಬಂದು ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮೊರಬ ಕ್ರಾಸ್ ಬಳಿ ಬೆಂಗಳೂರಿನಿಂದ ವಿಜಯಪುರಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ್ದಿದ್ದಾನೆ. ಪರಿಣಾಮ ಕೆಎಸ್ಆರ್ಟಿಸಿ ಬಸ್ ಚಾಲಕ ಮಲ್ಲಿಕಾರ್ಜುನ ಡಿ. ಪಾಟೀಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಎರಡು ಬಸ್ಸುಗಳಲ್ಲಿದ್ದ 23 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನುಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ 8 ಜನರನ್ನು ಬಳ್ಳಾರಿ ವಿಮ್ಸ್ಗೆ ಸಾಗಿಸಲಾಗಿದೆ. ಘಟನೆ ಕುರಿತು ಕೂಡ್ಲಿಗಿ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ.