ತುಮಕೂರು: ಕುಣಿಗಲ್ ಸಮೀಪ ಆಲಪ್ಪನ ಗುಡ್ಡೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಲಾರಿ ಮತ್ತು ಸುಗಮ ಟ್ರಾವೆಲ್ಸ್ ಬಸ್ ನಡುವೆ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ 28 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ಬಸ್ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳಲ್ಲಿ 10 ಮಂದಿಯ ಬೆನ್ನು ಮೂಳೆ ಮುರಿದಿದೆ. ಎಲ್ಲ 28 ಗಾಯಾಳುಗಳೂ ಬೆಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.