ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಕಳ ಬಳಿ ಬಸ್‌ ಅಪಘಾತ: 9 ಮಂದಿ ಸಾವು, ಹಲವರಿಗೆ ಗಾಯ

Last Updated 16 ಫೆಬ್ರುವರಿ 2020, 0:59 IST
ಅಕ್ಷರ ಗಾತ್ರ

ಉಡುಪಿ: ಕಾರ್ಕಳ ತಾಲ್ಲೂಕಿನ ಮಾಳ ಚೆಕ್‌ಪೋಸ್ಟ್‌ ಸಮೀಪದ ಅಬ್ಬಾಸ್‌ಕಟ್ಟೆ ಬಳಿ ಶನಿವಾರ ಪ್ರವಾಸಿ ಬಸ್‌ ಅಪಘಾತವಾಗಿದ್ದು, 9ಮಂದಿ ಮೃತಪಟ್ಟಿದ್ದಾರೆ.

ಬಸ್‌ನಲ್ಲಿ 35 ಮಂದಿ ಪ್ರಯಾಣಿಸುತ್ತಿದ್ದರು.ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಅಪಘಾತಕ್ಕೀಡಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್‌ಗಳು ತೆರಳಿವೆ.

6 ಮಂದಿ ಪುರುಷರು, 3 ಮಹಿಳೆಯರು ಮೃತಪಟ್ಟಿದ್ದು,ಅವರನ್ನು ಯೋಗೇಂದ್ರ, ಪ್ರೀತಂಗೌಡ, ಬಸವರಾಜ, ಅನುಜ್ಞಾ,ರಾಧಾ ರವಿ, ಶಾರುಲ್‌, ರಂಜಿತಾ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಕಾರ್ಕಳ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತವಾದ ಬಸ್‌ಮೈಸೂರಿನಿಂದ ಕುದುರೆಮುಖ ಮಾರ್ಗವಾಗಿ ಕಾರ್ಕಳಕ್ಕೆ ಬರುತ್ತಿತ್ತು. ಮೈಸೂರಿನ ಐಟಿ ಕಂಪೆನಿಯೊಂದರ ರೆಕಾರ್ಡ್ ನಿರ್ವಹಣೆ ಮಾಡುತ್ತಿದ್ದ ಸಿಬ್ಬಂದಿ ಪ್ರವಾಸಕ್ಕೆ ಬಂದಿದ್ದರು ಎಂಬುದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT