ಕೇಂದ್ರ ಸಚಿವ ಎಚ್.ಎನ್. ಅನಂತ್ ಕುಮಾರ್ ಅವರನ್ನು ಭಾನುವಾರ ಭೇಟಿಯಾಗಿದ್ದ ಸೋಮಣ್ಣ, ಗೋವಿಂದರಾಜನಗರ ಟಿಕೆಟ್ ಖಾತ್ರಿ ಪಡಿಸಿಕೊಂಡಿದ್ದರು. ನಂತರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನೂ ಭೇಟಿಯಾಗಿದ್ದರು. ಚರ್ಚೆಯ ವೇಳೆ, ಹನೂರಿಗೆ ಟಿಕೆಟ್ ಕೊಡುವುದಿಲ್ಲ ಎಂದು ಯಡಿಯೂರಪ್ಪ, ಸೋಮಣ್ಣಗೆ ಸ್ಪಷ್ಟವಾಗಿ ಹೇಳಿದ್ದರು.