ಬೆಂಗಳೂರು: ‘ನಮ್ಮ ಪಕ್ಷದ ಎಲ್ಲಾ ಶಾಸಕರು ದೆಹಲಿಯಿಂದ ವಾಪಸ್ ಬರುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕ ಪ್ರಕಟಣೆ ಹೊರಡಿಸಿದೆ.
ರಾಜ್ಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿ ಅಧಿಕಾರ ಹಿಡಿಯಲು ಮತ್ತೊಂದು ಸುತ್ತಿನ 'ಆಪರೇಷನ್ ಕಮಲ'ಕ್ಕೆ ಕೈ ಹಾಕಿದ್ದಬಿಜೆಪಿ, ಎದುರಾಳಿಗಳಿಂದ ಕಾಪಾಡಿಕೊಳ್ಳಲು ತನ್ನ ಶಾಸಕರನ್ನು ದೆಹಲಿ ಬಳಿಯ ಗುರುಗ್ರಾಮದ ಹೋಟೆಲೊಂದಕ್ಕೆ ಕರೆದೊಯ್ದಿತ್ತು.
ರಾಜ್ಯ ಮಂತ್ರಿಮಂಡಲ ಪುನಾರಚನೆಯ ನಂತರ ಸಚಿವ ಸ್ಥಾನ ಕಳೆದುಕೊಂಡ ಶಾಸಕರು ಮತ್ತು ಸ್ಥಾನ ಸಿಗದ ಮೈತ್ರಿ ಸರ್ಕಾರದಲ್ಲಿನಆಕಾಂಕ್ಷಿಗಳಅಸಮಾಧಾನವನ್ನು ಬಳಸಿಕೊಳ್ಳಲು ಬಿಜೆಪಿ ಪ್ರಯತ್ನ ನಡೆಸಿತ್ತು.
ಇನ್ನಷ್ಟು ಸುದ್ದಿಗಳು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.