ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ‘ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಪಕ್ಷದ ಹೈಕಮಾಂಡ್ ಸಿದ್ಧತೆ ನಡೆಸಿದೆ. ಪಕ್ಷದ ಶಾಸಕರೆಲ್ಲಾ ಒಟ್ಟಾಗಿದ್ದು, ವರಿಷ್ಠರ ಸೂಚನೆಯಂತೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ರಾಜ್ಯದಲ್ಲಿ ಕೋಮುವಾದಿ ಬಿಜೆಪಿಗೆ ಸರ್ಕಾರ ರಚಿಸುವ ಅವಕಾಶವಿಲ್ಲ. ಜಾತ್ಯಾತೀತ ತತ್ವದ ಸರ್ಕಾರ ರಚನೆಯಾಗಲಿದೆ’ ಎಂದು ತಿಳಿಸಿದರು.