ಸಚಿವ ಶಿವಳ್ಳಿ ಸೇವಿಸಿದ ಆಹಾರ ವಿಷವಾಗಿರುವ ಶಂಕೆ ?

ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರು ಸೇವಿಸಿರುವ ಉಪ್ಪಿಟ್ಟು ವಿಷವಾಗಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತವಾಗಿದೆ.
ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ, ‘ಸಚಿವರು ಸೇವಿಸಿರುವ ಆಹಾರ ವಿಷವಾಗಿರುವ ಸಾಧ್ಯತೆ ಇದೆ. ಈ ಕುರಿತು ಪರಿಶೀಲನೆಗಾಗಿ ಬೆಳಗಾವಿ ಫೋರೆನಿಕ್ಸ್ ( Forensic) ಲ್ಯಾಬ್ಗೆ ಸಚಿವರ ರಕ್ತದ ಮಾದರಿ ಹಾಗೂ ಹೊಟ್ಟೆ ಸ್ವಚ್ಛಗೊಳಿಸಿರುವ ಅಂಶವನ್ನು ಕಳುಹಿಸಲಾಗುವುದು’ ಎಂದು ಹೇಳಿದರು.
ಸಚಿವರು ಚೇತರಿಸಿಕೊಂಡಿದ್ದು, ಸಂಜೆಯೊಳಗೆ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗುವುದು ಎಂದರು. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಇದನ್ನೂ ಓದಿ... ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.