ನಗರದಲ್ಲಿ ನಡೆಯಲಿರುವ ಪೀಪಲ್ಸ್ ಫೋರಂನ ಸಿಎಎ ವಿರೋಧಿ ರಾಷ್ಟ್ರೀಯ ಸಮಾವೇಶಕ್ಕೂ ಮುನ್ನ ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, 'ನಾವು ಶಾಂತಿಯುತವಾಗಿ ಈ ಕಾಯ್ದೆ ವಿರುದ್ಧ ದಂಗೆ ಏಳುತ್ತೇವೆ. ಪೌರತ್ವ ಸಾಬೀತುಪಡಿಸಬೇಕಾದರೆ ಜನರು ಹತ್ತು ವರ್ಷ ಹಿಂದಕ್ಕೆ ಹೋಗಬೇಕಾಗುತ್ತದೆ. ಅದಕ್ಕಾಗಿ ಇಂದು ಕಲಬುರ್ಗಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಮೂರು ಕಾಯ್ದೆಗಳನ್ನ ವಾಪಸ್ ಪಡೆಯುವವರೆಗೆ ನಮ್ಮ ಹೋರಾಟ ನಿಲ್ಲಿಸುವುದಿಲ್ಲ. ದೇಶದ ಸಂವಿಧಾನದ ಮೇಲೆ ಬಿಜೆಪಿ ನೇತೃತ್ವದ ಸರ್ಕಾರ ನಿರಂತರ ದಾಳಿ ಮಾಡುತ್ತಿದೆ' ಎಂದು ಟೀಕಿಸಿದರು.