ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ, ಎನ್ಆರ್‌ಸಿ ದೇಶದ ಜನರ ವಿರುದ್ಧ: ಸೀತಾರಾಂ ಯೆಚೂರಿ

Last Updated 21 ಜನವರಿ 2020, 10:49 IST
ಅಕ್ಷರ ಗಾತ್ರ

ಕಲಬುರ್ಗಿ: ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ಗಳು ದೇಶದ ಜನರ ವಿರುದ್ಧವಾಗಿವೆ. ಪೌರತ್ವ ಕಾಯ್ದೆಯನ್ನ ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸಿಪಿಎಂ ‌ಪಕ್ಷದ ರಾಷ್ಟ್ರೀಯ ನಾಯಕ ಸೀತಾರಾಂ ಯೆಚೂರಿ ಸ್ಪಷ್ಟಪಡಿಸಿದರು.

ನಗರದಲ್ಲಿ ‌ನಡೆಯಲಿರುವ ಪೀಪಲ್ಸ್ ಫೋರಂನ ಸಿಎಎ ವಿರೋಧಿ ರಾಷ್ಟ್ರೀಯ ‌ಸಮಾವೇಶಕ್ಕೂ‌ ಮುನ್ನ ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ‌ಮಾತನಾಡಿದ ಅವರು, 'ನಾವು ಶಾಂತಿಯುತವಾಗಿ ಈ ಕಾಯ್ದೆ ವಿರುದ್ಧ ದಂಗೆ ಏಳುತ್ತೇವೆ. ಪೌರತ್ವ ಸಾಬೀತುಪಡಿಸಬೇಕಾದರೆ ಜನರು ಹತ್ತು ವರ್ಷ ಹಿಂದಕ್ಕೆ ಹೋಗಬೇಕಾಗುತ್ತದೆ. ಅದಕ್ಕಾಗಿ ಇಂದು ಕಲಬುರ್ಗಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಮೂರು ಕಾಯ್ದೆಗಳನ್ನ ವಾಪಸ್ ಪಡೆಯುವವರೆಗೆ ನಮ್ಮ ಹೋರಾಟ ನಿಲ್ಲಿಸುವುದಿಲ್ಲ. ದೇಶದ ಸಂವಿಧಾನದ ಮೇಲೆ ಬಿಜೆಪಿ ನೇತೃತ್ವದ ಸರ್ಕಾರ ನಿರಂತರ ದಾಳಿ ಮಾಡುತ್ತಿದೆ' ಎಂದು ‌ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT