ಆರ್. ಶಂಕರ್, ಎಚ್. ನಾಗೇಶ್ ಅವರು ಸಚಿವರಾಗಿ ಜೂನ್ 14ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಖಾತೆ ಹಂಚಿಕೆ ಮಾಡಬೇಕಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೂನ್ 14ರಂದೇ ರಾತ್ರಿ ದೆಹಲಿಗೆ ತೆರಳಿದ್ದು, ಭಾನುವಾರ ವಾಪಸಾಗಿದ್ದಾರೆ. ಸೋಮವಾರ ಚನ್ನಪಟ್ಟಣ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು, ಮಂಗಳವಾರ ಸಹ ಕ್ಷೇತ್ರದ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.