<p><strong>ಬೆಂಗಳೂರು:</strong> ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಂಪೂರ್ಣ ನಾಶವಾಗಿರುವ ಮನೆಗಳ ನಿರ್ಮಾಣಕ್ಕಾಗಿ ತಕ್ಷಣವೇ ₹1,000 ಕೋಟಿ ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಈ ಹಣವನ್ನು ಇನ್ನು ಎರಡು– ಮೂರು ದಿನಗಳಲ್ಲಿ ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸಂಪುಟ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.</p>.<p>ಪೂರ್ಣ ನಾಶವಾಗಿರುವ ಒಂದು ಮನೆ ನಿರ್ಮಾಣಕ್ಕೆ ₹5 ಲಕ್ಷ ನೀಡಲಾಗುವುದು. ಹಿಂದೆ ಮನೆ ಹೊಂದಿರುವುದಕ್ಕೆ ದಾಖಲೆಗಳನ್ನು ಈಗಾಗಲೇ ಸಲ್ಲಿಸಿರುವವರಿಗೆ ಮನೆಗೆ ಪಾಯ ಹಾಕಿಸಲು ತಕ್ಷಣವೇ ₹1ಲಕ್ಷ ಮೊದಲ ಕಂತಿನಲ್ಲಿ ವಿತರಿಸಲಾಗುವುದು. ಭಾಗಶಃ ಹಾನಿಯಾದ ಮನೆಗಳಿಗೆ ತಲಾ ₹25 ಸಾವಿರ ನೀಡಲಾಗುವುದು. ಸುಮಾರು 30 ಸಾವಿರದಿಂದ 40 ಸಾವಿರ ಮನೆಗಳು ಸಂಪೂರ್ಣ ನಾಶ ಆಗಿದೆ ಎಂದು ಅಂದಾಜು ಮಾಡಲಾಗಿದೆ. ಶೇ 50 ರಷ್ಟು ಮನೆಗಳ ದಾಖಲೆ ಸಿಕ್ಕಿದೆ ಎಂದರು.</p>.<p>ನೆರೆ ಪೀಡಿತ ಪ್ರದೇಶದಲ್ಲಿ ಹಾನಿಯಾಗಿರುವ ರಸ್ತೆಗಳು ಮತ್ತು ಸೇತುವೆಗಳನ್ನು ಸರಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ ₹500 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮಾಧುಸ್ವಾಮಿ ಹೇಳಿದರು.</p>.<p>ಈ ಉದ್ದೇಶಕ್ಕೆ ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಮೀಸಲಾದ ಅನುದಾನವನ್ನು ಬಳಸುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಾಲೋನಿಯಲ್ಲಿ ನಾಶವಾಗಿರುವ ಮನೆಗಳ ನಿರ್ಮಾಣಕ್ಕೆ ಪರಿಶಿಷ್ಟ ವರ್ಗದ ಅನುದಾನದಲ್ಲಿ ಬಳಕೆಯಾಗದೇ ಉಳಿದಿರುವ ಹಣವನ್ನು ಬಳಸಿಕೊಳ್ಳಲಾಗುವುದು. ಅವರ ಕಾಲೋನಿಗಳ ಅಭಿವೃದ್ಧಿಗಾಗಿಯೇ ಬಳಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.</p>.<p class="Subhead">ತಡೆ ಹಿಡಿದಿದ್ದ ಕಾಮಗಾರಿಗೆ ಅನುಮೋದನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಶಾಸಕರ ಕ್ಷೇತ್ರಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆಯುತ್ತಿದ್ದ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ (ಅಪೆಂಡಿಕ್ಸ್ ಸಿ) ತಡೆ ನೀಡಿದ್ದರು. ಬಹಳಷ್ಟುಕಾಮಗಾರಿಗಳಿಗೆ ಟೆಂಡರ್ ಆಗಿ ಕಾಮಗಾರಿಯೂ ಆರಂಭವಾಗಿತ್ತು. ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದವು. ಈ ಹಿನ್ನೆಲೆಯಲ್ಲಿ ಶಾಸಕರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಕಾಮಗಾರಿ ಮುಂದುವರಿಸಲು ಕೋರಿದ್ದರು.</p>.<p>ನಿಯಮ ಉಲ್ಲಂಘನೆ ಆಗದ ಮತ್ತು ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಮುಂದುವರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಕಾಮಗಾರಿಗೆ ₹1500 ಕೋಟಿ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮಾಧುಸ್ವಾಮಿ ಹೇಳಿದರು.</p>.<p><strong>ಕಾರಾಗೃಹ ಸಿಬ್ಬಂದಿಗೂ ವೇತನ ಹೆಚ್ಚಳ</strong></p>.<p>ಅಗ್ನಿಶಾಮಕ ತುರ್ತುಸೇವೆ, ಕಾರಾಗೃಹ ಸಿಬ್ಬಂದಿಗೂ ಔರಾದಕರ ಶಿಫಾರಸಿನಂತೆ ವೇತನ ಪರಿಷ್ಕರಣೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಸಂಬಂಧ ತಕ್ಷಣವೇ ಆದೇಶ ಹೊರಡಿಸಲಾಗುವುದು. ಇತ್ತೀಚೆಗೆ ಪೊಲೀಸರಿಗೆ ಮಾತ್ರ ವೇತನ ಪರಿಷ್ಕರಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಹೊರಡಿಸಿದ್ದ ಸುತ್ತೋಲೆಗೆ ತಡೆ ನೀಡಲಾಗಿತ್ತು. ಅಗ್ನಿಶಾಮಕ ಮತ್ತು ಕಾರಾಗೃಹ ಸಿಬ್ಬಂದಿಗೆ ಪರಿಷ್ಕೃತ ವೇತನವನ್ನು ಪೂರ್ವಾನ್ವಯವಾಗಿ ನೀಡಲು ನಿರ್ಧರಿಸಲಾಗಿದೆ.</p>.<p><strong>ಜಿಲ್ಲಾ ಆಸ್ಪತ್ರೆ: ಕ್ಯಾನ್ಸರ್ ತಪಾಸಣಾ ಘಟಕ</strong></p>.<p>ಮಂಗಳೂರು, ಮೈಸೂರು, ವಿಜಯಪುರ,ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಚಿಕ್ಕಮಗಳೂರು, ಹಾವೇರಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗಳಲ್ಲಿ ತಲಾ 1 ಕೋಟಿ ವೆಚ್ಚದಲ್ಲಿ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ಗಳನ್ನು ಪತ್ತೆ ಮಾಡುವ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಮಾಧುಸ್ವಾಮಿ ಹೇಳಿದರು.</p>.<p>ಅತ್ಯಾಧುನಿಕ ಮ್ಯಾಮೊಗ್ರಫಿ ಮತ್ತು ಪ್ಯಾಪ್ಸ್ಮಿಯರ್ ಸ್ಕ್ಯಾನಿಂಗ್ ಯಂತ್ರಗಳ ಮೂಲಕ ಕ್ಯಾನ್ಸರ್ ಪತ್ತೆ ಮಾಡಲಾಗುವುದು ಎಂದರು.<br />ಕಲಬುರ್ಗಿಯ ಜಯದೇವ ಹೃದ್ರೋಗ ಸಂಸ್ಥೆಯನ್ನು ₹150 ಕೋಟಿ ವೆಚ್ಚದಲ್ಲಿ 300 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲಾಗುವುದು ಎಂದರು.</p>.<p><strong>ಅ.14 ರಿಂದ ಅಧಿವೇಶನ</strong></p>.<p>ಅಕ್ಟೋಬರ್ 14 ರಿಂದ 26 ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ್ದ ಬಜೆಟ್ಗೆ ಒಪ್ಪಿಗೆ ಪಡೆಯಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದರು.</p>.<p>ಬೆಳಗಾವಿ ಜಿಲ್ಲೆ ನೆರೆ ಪೀಡಿತವಾಗಿರುವುದರಿಂದ ಅಧಿಕಾರಿಗಳು ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಲ್ಲಿ ಅಧಿವೇಶನ ನಡೆಸುವುದರಿಂದ ಅವರ ಕಾರ್ಯಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ. ವಿರೋಧ ಪಕ್ಷಗಳಿಗೆ ಹೆದರಿ ಬೆಂಗಳೂರಿನಲ್ಲಿ ನಡೆಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>‘ಬೆಳಗಾವಿಯಾಗಲಿ, ಬೆಂಗಳೂರಾಗಲಿ ಅದೇ ಶಾಸಕರನ್ನು ಎದುರಿಸಬೇಕು. ವಿರೋಧ ಪಕ್ಷದವರನ್ನು ಎದುರಿಸಲು ನಾವು ಸಿದ್ಧರಿದ್ದೇವೆ’ ಎಂದು ಹೇಳಿದರು.<br />**</p>.<p><strong>ಸಂಪುಟ ಸಭೆಯ ಪ್ರಮುಖ ನಿರ್ಣಯಗಳು</strong></p>.<p>* ಬಯಲುಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದ ಈ ವ್ಯಾಪ್ತಿಯ 97 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹1ಕೋಟಿ ನೀಡಲಾಗುವುದು. ಕ್ರಿಯಾಯೋಜನೆ ಸಲ್ಲಿಸುವ ಕ್ಷೇತ್ರಗಳಿಗೆ ಹಣ ಬಿಡುಗಡೆ. ಇದಕ್ಕಾಗಿ ₹97 ಕೋಟಿ ನಿಗದಿ.</p>.<p>* ಏಷ್ಯಾ ಅಭಿವೃದ್ಧಿ ಬ್ಯಾಂಕ್ನಿಂದ ₹ 456 ಕೋಟಿ ಸಾಲ ಪಡೆದು ಹೊಸಪೇಟೆಯ ವಿಜಯನಗರ ಕಾಲದ ಹಳೇ ನಾಲೆಗಳ ಆಧುನೀಕರಣ.</p>.<p>* ಬೆಳಗಾವಿ ಜಿಲ್ಲೆ ಹಿಂಡಲಗಾ ಹೋಬಳಿಯ 21 ಗ್ರಾಮಗಳಲ್ಲಿ ಕುಡಿಯುವ ನೀರು ಸೌಲಭ್ಯಕ್ಕೆ ₹322.22 ಕೋಟಿ ಅನುದಾನ ನೀಡಲು ಆಡಳಿತಾತ್ಮಕ ಅನುಮೋದನೆ.</p>.<p>* ಮಾರ್ಕಂಡೇಯ ನದಿಯಿಂದ 0.162 ಟಿಎಂಸಿ ನೀರನ್ನು ಏತ ನೀರಾವರಿ ಮೂಲಕ ಬಹುಗ್ರಾಮ ಯೋಜನೆಯಡಿ ಪೂರೈಕೆ ಮಾಡಲು ₹143 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ ತಯಾರಿಸಲು ಒಪ್ಪಿಗೆ.</p>.<p>* ಎಲ್ಲ ಜಿಲ್ಲೆಗಳಲ್ಲೂ ಪೋಷಣೆ ಯೋಜನೆ ಅನುಷ್ಠಾನಕ್ಕೆ ₹ 9 ಕೋಟಿ ನೀಡಲು ಒಪ್ಪಿಗೆ</p>.<p>* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸೇವಾ ನಿಯಮಗಳಿಗೆ ಒಪ್ಪಿಗೆ</p>.<p>* ಅಗರ ಎಸ್ಟಿಪಿಯಿಂದ ಹೆಚ್ಚುವರಿ 35 ಎಂಎಲ್ಡಿ ನೀರನ್ನು ಸಂಸ್ಕರಣೆ ಮಾಡಿ ಕೆ.ಸಿ.ವ್ಯಾಲಿಗೆ ಹರಿಸಲು ₹30 ಕೋಟಿ ಯೋಜನೆಗೆ ಅನುಮೋದನೆ.</p>.<p>* ಸಚಿವಾಲಯದ ಬೇರೆ,ಬೇರೆ ಇಲಾಖೆಗಳ ಸಾಫ್ಟ್ವೇರ್ ಮತ್ತು ಹಾರ್ಡ್ವೇರ್ಗಳ ನಿರ್ವಹಣೆ ವ್ಯವಸ್ಥೆಯ ₹9.55 ಕೋಟಿ ಟೆಂಡರ್ಗೆ ಅನುಮತಿ.</p>.<p>* ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕೋಡಾಳುವಿನ 28 ಜನವಸತಿ ಬಹುಗ್ರಾಮ ಯೋಜನೆಯಡಿ ₹57.28 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ವ್ಯವಸ್ಥೆ.</p>.<p>* ರಾಜ್ಯ ಮಾನವ ಹಕ್ಕುಗಳ ಆಯೋಗದ ಒಬ್ಬ ಸದಸ್ಯರ ಕಚೇರಿಯನ್ನು ಧಾರವಾಡಕ್ಕೆ ಸ್ಥಳಾಂತರಿಸುವ ನಿರ್ಧಾರ ಕೈಬಿಟ್ಟಿರುವ ಸರ್ಕಾರ ಆಯೋಗ ಪೂರ್ಣ ಪ್ರಮಾಣದಲ್ಲಿ ಬೆಂಗಳೂರಿನಲ್ಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದೆ.</p>.<p>**</p>.<p>ಕಾಫಿ ಮತ್ತು ಇತರ ಸಂಬಾರ ಪದಾರ್ಥಗಳ ಬೆಳೆಗಳಿಗೆ ಆಗಿರುವ ನಷ್ಟ ಭರಿಸಲು ಪ್ರತ್ಯೇಕ ಪ್ಯಾಕೇಜ್ ಮಾಡಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ<br /><em><strong>– ಜೆ.ಸಿ.ಮಾಧುಸ್ವಾಮಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಂಪೂರ್ಣ ನಾಶವಾಗಿರುವ ಮನೆಗಳ ನಿರ್ಮಾಣಕ್ಕಾಗಿ ತಕ್ಷಣವೇ ₹1,000 ಕೋಟಿ ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಈ ಹಣವನ್ನು ಇನ್ನು ಎರಡು– ಮೂರು ದಿನಗಳಲ್ಲಿ ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸಂಪುಟ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.</p>.<p>ಪೂರ್ಣ ನಾಶವಾಗಿರುವ ಒಂದು ಮನೆ ನಿರ್ಮಾಣಕ್ಕೆ ₹5 ಲಕ್ಷ ನೀಡಲಾಗುವುದು. ಹಿಂದೆ ಮನೆ ಹೊಂದಿರುವುದಕ್ಕೆ ದಾಖಲೆಗಳನ್ನು ಈಗಾಗಲೇ ಸಲ್ಲಿಸಿರುವವರಿಗೆ ಮನೆಗೆ ಪಾಯ ಹಾಕಿಸಲು ತಕ್ಷಣವೇ ₹1ಲಕ್ಷ ಮೊದಲ ಕಂತಿನಲ್ಲಿ ವಿತರಿಸಲಾಗುವುದು. ಭಾಗಶಃ ಹಾನಿಯಾದ ಮನೆಗಳಿಗೆ ತಲಾ ₹25 ಸಾವಿರ ನೀಡಲಾಗುವುದು. ಸುಮಾರು 30 ಸಾವಿರದಿಂದ 40 ಸಾವಿರ ಮನೆಗಳು ಸಂಪೂರ್ಣ ನಾಶ ಆಗಿದೆ ಎಂದು ಅಂದಾಜು ಮಾಡಲಾಗಿದೆ. ಶೇ 50 ರಷ್ಟು ಮನೆಗಳ ದಾಖಲೆ ಸಿಕ್ಕಿದೆ ಎಂದರು.</p>.<p>ನೆರೆ ಪೀಡಿತ ಪ್ರದೇಶದಲ್ಲಿ ಹಾನಿಯಾಗಿರುವ ರಸ್ತೆಗಳು ಮತ್ತು ಸೇತುವೆಗಳನ್ನು ಸರಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ ₹500 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮಾಧುಸ್ವಾಮಿ ಹೇಳಿದರು.</p>.<p>ಈ ಉದ್ದೇಶಕ್ಕೆ ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಮೀಸಲಾದ ಅನುದಾನವನ್ನು ಬಳಸುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಾಲೋನಿಯಲ್ಲಿ ನಾಶವಾಗಿರುವ ಮನೆಗಳ ನಿರ್ಮಾಣಕ್ಕೆ ಪರಿಶಿಷ್ಟ ವರ್ಗದ ಅನುದಾನದಲ್ಲಿ ಬಳಕೆಯಾಗದೇ ಉಳಿದಿರುವ ಹಣವನ್ನು ಬಳಸಿಕೊಳ್ಳಲಾಗುವುದು. ಅವರ ಕಾಲೋನಿಗಳ ಅಭಿವೃದ್ಧಿಗಾಗಿಯೇ ಬಳಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.</p>.<p class="Subhead">ತಡೆ ಹಿಡಿದಿದ್ದ ಕಾಮಗಾರಿಗೆ ಅನುಮೋದನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಶಾಸಕರ ಕ್ಷೇತ್ರಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆಯುತ್ತಿದ್ದ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ (ಅಪೆಂಡಿಕ್ಸ್ ಸಿ) ತಡೆ ನೀಡಿದ್ದರು. ಬಹಳಷ್ಟುಕಾಮಗಾರಿಗಳಿಗೆ ಟೆಂಡರ್ ಆಗಿ ಕಾಮಗಾರಿಯೂ ಆರಂಭವಾಗಿತ್ತು. ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದವು. ಈ ಹಿನ್ನೆಲೆಯಲ್ಲಿ ಶಾಸಕರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಕಾಮಗಾರಿ ಮುಂದುವರಿಸಲು ಕೋರಿದ್ದರು.</p>.<p>ನಿಯಮ ಉಲ್ಲಂಘನೆ ಆಗದ ಮತ್ತು ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಮುಂದುವರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಕಾಮಗಾರಿಗೆ ₹1500 ಕೋಟಿ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮಾಧುಸ್ವಾಮಿ ಹೇಳಿದರು.</p>.<p><strong>ಕಾರಾಗೃಹ ಸಿಬ್ಬಂದಿಗೂ ವೇತನ ಹೆಚ್ಚಳ</strong></p>.<p>ಅಗ್ನಿಶಾಮಕ ತುರ್ತುಸೇವೆ, ಕಾರಾಗೃಹ ಸಿಬ್ಬಂದಿಗೂ ಔರಾದಕರ ಶಿಫಾರಸಿನಂತೆ ವೇತನ ಪರಿಷ್ಕರಣೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಸಂಬಂಧ ತಕ್ಷಣವೇ ಆದೇಶ ಹೊರಡಿಸಲಾಗುವುದು. ಇತ್ತೀಚೆಗೆ ಪೊಲೀಸರಿಗೆ ಮಾತ್ರ ವೇತನ ಪರಿಷ್ಕರಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಹೊರಡಿಸಿದ್ದ ಸುತ್ತೋಲೆಗೆ ತಡೆ ನೀಡಲಾಗಿತ್ತು. ಅಗ್ನಿಶಾಮಕ ಮತ್ತು ಕಾರಾಗೃಹ ಸಿಬ್ಬಂದಿಗೆ ಪರಿಷ್ಕೃತ ವೇತನವನ್ನು ಪೂರ್ವಾನ್ವಯವಾಗಿ ನೀಡಲು ನಿರ್ಧರಿಸಲಾಗಿದೆ.</p>.<p><strong>ಜಿಲ್ಲಾ ಆಸ್ಪತ್ರೆ: ಕ್ಯಾನ್ಸರ್ ತಪಾಸಣಾ ಘಟಕ</strong></p>.<p>ಮಂಗಳೂರು, ಮೈಸೂರು, ವಿಜಯಪುರ,ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಚಿಕ್ಕಮಗಳೂರು, ಹಾವೇರಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗಳಲ್ಲಿ ತಲಾ 1 ಕೋಟಿ ವೆಚ್ಚದಲ್ಲಿ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ಗಳನ್ನು ಪತ್ತೆ ಮಾಡುವ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಮಾಧುಸ್ವಾಮಿ ಹೇಳಿದರು.</p>.<p>ಅತ್ಯಾಧುನಿಕ ಮ್ಯಾಮೊಗ್ರಫಿ ಮತ್ತು ಪ್ಯಾಪ್ಸ್ಮಿಯರ್ ಸ್ಕ್ಯಾನಿಂಗ್ ಯಂತ್ರಗಳ ಮೂಲಕ ಕ್ಯಾನ್ಸರ್ ಪತ್ತೆ ಮಾಡಲಾಗುವುದು ಎಂದರು.<br />ಕಲಬುರ್ಗಿಯ ಜಯದೇವ ಹೃದ್ರೋಗ ಸಂಸ್ಥೆಯನ್ನು ₹150 ಕೋಟಿ ವೆಚ್ಚದಲ್ಲಿ 300 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲಾಗುವುದು ಎಂದರು.</p>.<p><strong>ಅ.14 ರಿಂದ ಅಧಿವೇಶನ</strong></p>.<p>ಅಕ್ಟೋಬರ್ 14 ರಿಂದ 26 ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ್ದ ಬಜೆಟ್ಗೆ ಒಪ್ಪಿಗೆ ಪಡೆಯಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದರು.</p>.<p>ಬೆಳಗಾವಿ ಜಿಲ್ಲೆ ನೆರೆ ಪೀಡಿತವಾಗಿರುವುದರಿಂದ ಅಧಿಕಾರಿಗಳು ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಲ್ಲಿ ಅಧಿವೇಶನ ನಡೆಸುವುದರಿಂದ ಅವರ ಕಾರ್ಯಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ. ವಿರೋಧ ಪಕ್ಷಗಳಿಗೆ ಹೆದರಿ ಬೆಂಗಳೂರಿನಲ್ಲಿ ನಡೆಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>‘ಬೆಳಗಾವಿಯಾಗಲಿ, ಬೆಂಗಳೂರಾಗಲಿ ಅದೇ ಶಾಸಕರನ್ನು ಎದುರಿಸಬೇಕು. ವಿರೋಧ ಪಕ್ಷದವರನ್ನು ಎದುರಿಸಲು ನಾವು ಸಿದ್ಧರಿದ್ದೇವೆ’ ಎಂದು ಹೇಳಿದರು.<br />**</p>.<p><strong>ಸಂಪುಟ ಸಭೆಯ ಪ್ರಮುಖ ನಿರ್ಣಯಗಳು</strong></p>.<p>* ಬಯಲುಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದ ಈ ವ್ಯಾಪ್ತಿಯ 97 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹1ಕೋಟಿ ನೀಡಲಾಗುವುದು. ಕ್ರಿಯಾಯೋಜನೆ ಸಲ್ಲಿಸುವ ಕ್ಷೇತ್ರಗಳಿಗೆ ಹಣ ಬಿಡುಗಡೆ. ಇದಕ್ಕಾಗಿ ₹97 ಕೋಟಿ ನಿಗದಿ.</p>.<p>* ಏಷ್ಯಾ ಅಭಿವೃದ್ಧಿ ಬ್ಯಾಂಕ್ನಿಂದ ₹ 456 ಕೋಟಿ ಸಾಲ ಪಡೆದು ಹೊಸಪೇಟೆಯ ವಿಜಯನಗರ ಕಾಲದ ಹಳೇ ನಾಲೆಗಳ ಆಧುನೀಕರಣ.</p>.<p>* ಬೆಳಗಾವಿ ಜಿಲ್ಲೆ ಹಿಂಡಲಗಾ ಹೋಬಳಿಯ 21 ಗ್ರಾಮಗಳಲ್ಲಿ ಕುಡಿಯುವ ನೀರು ಸೌಲಭ್ಯಕ್ಕೆ ₹322.22 ಕೋಟಿ ಅನುದಾನ ನೀಡಲು ಆಡಳಿತಾತ್ಮಕ ಅನುಮೋದನೆ.</p>.<p>* ಮಾರ್ಕಂಡೇಯ ನದಿಯಿಂದ 0.162 ಟಿಎಂಸಿ ನೀರನ್ನು ಏತ ನೀರಾವರಿ ಮೂಲಕ ಬಹುಗ್ರಾಮ ಯೋಜನೆಯಡಿ ಪೂರೈಕೆ ಮಾಡಲು ₹143 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ ತಯಾರಿಸಲು ಒಪ್ಪಿಗೆ.</p>.<p>* ಎಲ್ಲ ಜಿಲ್ಲೆಗಳಲ್ಲೂ ಪೋಷಣೆ ಯೋಜನೆ ಅನುಷ್ಠಾನಕ್ಕೆ ₹ 9 ಕೋಟಿ ನೀಡಲು ಒಪ್ಪಿಗೆ</p>.<p>* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸೇವಾ ನಿಯಮಗಳಿಗೆ ಒಪ್ಪಿಗೆ</p>.<p>* ಅಗರ ಎಸ್ಟಿಪಿಯಿಂದ ಹೆಚ್ಚುವರಿ 35 ಎಂಎಲ್ಡಿ ನೀರನ್ನು ಸಂಸ್ಕರಣೆ ಮಾಡಿ ಕೆ.ಸಿ.ವ್ಯಾಲಿಗೆ ಹರಿಸಲು ₹30 ಕೋಟಿ ಯೋಜನೆಗೆ ಅನುಮೋದನೆ.</p>.<p>* ಸಚಿವಾಲಯದ ಬೇರೆ,ಬೇರೆ ಇಲಾಖೆಗಳ ಸಾಫ್ಟ್ವೇರ್ ಮತ್ತು ಹಾರ್ಡ್ವೇರ್ಗಳ ನಿರ್ವಹಣೆ ವ್ಯವಸ್ಥೆಯ ₹9.55 ಕೋಟಿ ಟೆಂಡರ್ಗೆ ಅನುಮತಿ.</p>.<p>* ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕೋಡಾಳುವಿನ 28 ಜನವಸತಿ ಬಹುಗ್ರಾಮ ಯೋಜನೆಯಡಿ ₹57.28 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ವ್ಯವಸ್ಥೆ.</p>.<p>* ರಾಜ್ಯ ಮಾನವ ಹಕ್ಕುಗಳ ಆಯೋಗದ ಒಬ್ಬ ಸದಸ್ಯರ ಕಚೇರಿಯನ್ನು ಧಾರವಾಡಕ್ಕೆ ಸ್ಥಳಾಂತರಿಸುವ ನಿರ್ಧಾರ ಕೈಬಿಟ್ಟಿರುವ ಸರ್ಕಾರ ಆಯೋಗ ಪೂರ್ಣ ಪ್ರಮಾಣದಲ್ಲಿ ಬೆಂಗಳೂರಿನಲ್ಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದೆ.</p>.<p>**</p>.<p>ಕಾಫಿ ಮತ್ತು ಇತರ ಸಂಬಾರ ಪದಾರ್ಥಗಳ ಬೆಳೆಗಳಿಗೆ ಆಗಿರುವ ನಷ್ಟ ಭರಿಸಲು ಪ್ರತ್ಯೇಕ ಪ್ಯಾಕೇಜ್ ಮಾಡಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ<br /><em><strong>– ಜೆ.ಸಿ.ಮಾಧುಸ್ವಾಮಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>