ಬೆಂಗಳೂರು: 'ಲಾಭ'ದ ಖಾತೆಗಳನ್ನು ಬಿಟ್ಟುಕೊಡಲು 'ಪ್ರಭಾವಿ' ಸಚಿವರು ಹಿಂದೇಟು ಹಾಕುತ್ತಿರುವುದರಿಂದ,ಪ್ರಮಾಣವಚನ ಸ್ವೀಕರಿಸಿ 5–6 ದಿನ ಕಳೆದರೂ ಎಂಟು ಮಂದಿನೂತನ ಸಚಿವರಿಗೆ ಖಾತೆಹಂಚಿಕೆಯಾಗಿಲ್ಲ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರು ಬುಧವಾರ ನಡೆಸಿದ ನಾಯಕರಸಭೆಯಲ್ಲಿ ಒಮ್ಮತ ಮೂಡದ ಕಾರಣ ಖಾತೆ ಹಂಚಿಕೆಗೊಂದಲಇತ್ಯರ್ಥವಾಗಿಲ್ಲ. ಹೀಗಾಗಿ ವೇಣುಗೋಪಾಲ್ ಅವರುಸಭೆ ಮುಗಿದ ತಕ್ಷಣವೇ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದರು.
ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರಗ್ರೀನ್ ಸಿಗ್ನಲ್ ದೊರೆತ ಬಳಿಕ ನೂತನ ಸಚಿವರ ಖಾತೆಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಬಹುತೇಕ ಇಂದು(ಗುರುವಾರ)ಸಂಜೆಯೊಳಗೆ ಖಾತೆ ಹಂಚಿಕೆ ಫೈನಲ್ ಆಗುವ ಸಾಧ್ಯತೆಯಿದೆ.
ಖಾತೆ ಹಂಚಿಕೆ ಗೊಂದಲ ಇಲ್ಲ:ಜಿ.ಪರಮೇಶ್ವರ
ನಮ್ಮಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳಿಲ್ಲ. ನನ್ನ ಖಾತೆಯಿಂದಾಗಿ ವಿಳಂಬವಾಯಿತು ಅನ್ನೋದು ಸರಿಯಲ್ಲ. ಉಸ್ತುವಾರಿ ವೇಣುಗೋಪಾಲ್ ಅವರುಎರಡು ದಿನ ತಡವಾಗಿ ಬಂದರು. ಹೀಗಾಗಿ ಖಾತೆ ಹಂಚಿಕೆ ವಿಳಂಬವಾಯಿತು. ಇಂದು ನಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಖಾತೆ ಅಂತಿಮ ಮಾಡಲಿದ್ದಾರೆ.
‘ಇಪ್ಪತ್ನಾಲ್ಕು ಗಂಟೆಗಳಲ್ಲಿಸರ್ಕಾರ ಬೀಳುತ್ತದೆ’ಎಂಬ ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ‘ಇಪ್ಪತ್ನಾಲ್ಕು ಗಂಟೆಯ ನಂತರ ನಿಮಗೇ ಎಲ್ಲ ಗೊತ್ತಾಗುತ್ತೆ. ನಮ್ಮ ಶಾಸಕರು ಎಲ್ಲೂ ಹೋಗಿಲ್ಲ, ಜೊತೆಯಲ್ಲೇ ಇದ್ದಾರೆ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದರು.
ಸಿದ್ದರಾಮಯ್ಯ ಸರಣಿ ಟ್ವೀಟ್..
ಡಾ.ಜಿ.ಪರಮೇಶ್ವರ್ ಮತ್ತು ನನ್ನ ನಡುವೆ ಭಿನ್ನಾಭಿಪ್ರಾಯವೇ ಇಲ್ಲ, ನಿನ್ನೆಯ ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ-ವಾಗ್ವಾದ ನಡೆದಿಲ್ಲ. ಇದನ್ನು ಹೇಳಿದವರು ಯಾರು? ವಿರೋಧ ಪಕ್ಷಗಳ ಕೆಲವು ನಾಯಕರು ಹತಾಶರಾಗಿ ಹರಡುತ್ತಿರುವ ಸುದ್ದಿಗಳನ್ನು ಮಾಧ್ಯಮಗಳು ವರದಿ ಮಾಡುವ ಮೊದಲು ಪರಾಮರ್ಶಿಸಿದರೆ ಒಳ್ಳೆಯದು.@INCKarnataka
— Siddaramaiah (@siddaramaiah) December 27, 2018
ಸಚಿವ ಖಾತೆ ಮರುಹಂಚಿಕೆ ಬಗ್ಗೆ ನಿನ್ನೆಯ ಸಭೆಯಲ್ಲಿ ಚರ್ಚೆ ಸೌಹಾರ್ದತಯುತವಾಗಿಯೇ ನಡೆದಿದೆ. ಸಭೆಯಲ್ಲಿದ್ದ ನಾಯಕರೆಲ್ಲ ಹಿರಿಯರು, ಅನುಭವಿಗಳು, ಈ ರೀತಿ ಜಗಳವಾಡಲು ನಮ್ಮಲ್ಲಿ ಯಾರೂ ಮಕ್ಕಳಿಲ್ಲ. ಕಪೋಲ ಕಲ್ಪಿತ ಸುದ್ದಿಗಳನ್ನು ನಂಬಬೇಡಿ, ಹರಡಬೇಡಿ.@INCKarnataka
— Siddaramaiah (@siddaramaiah) December 27, 2018
ಸಚಿವ ಖಾತೆ ಮರುಹಂಚಿಕೆ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಎಲ್ಲ ನಾಯಕರಿಂದ ವ್ಯಕ್ತವಾದ ಅಭಿಪ್ರಾಯಗಳನ್ನು ಕೆ.ಸಿ.ವೇಣುಗೋಪಾಲ್ ಅವರು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರುತ್ತಾರೆ. ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿ ಕೈಗೊಳ್ಳುತ್ತಾರೆ.@INCKarnataka
— Siddaramaiah (@siddaramaiah) December 27, 2018
ನಾನು ಮುಖ್ಯಮಂತ್ರಿಯಾಗಿದ್ದ ೫ ವರ್ಷಗಳ ಕಾಲ ನನ್ನ ಮತ್ತು ಡಾ.ಪರಮೇಶ್ವರ್ ಸಂಬಂಧ ಕೆಡಿಸುವ ಪ್ರಯತ್ನವನ್ನು ವಿರೋಧ ಪಕ್ಷಗಳ ನಾಯಕರು ಮಾಡುತ್ತಲೇ ಇದ್ದರು. ಅದು ಈಗಲೂ ಮುಂದುವರಿದಿದೆ. ಅಂತಹ ಯಾವ ಪ್ರಯತ್ನವೂ ಯಶಸ್ವಿಯಾಗುವುದಿಲ್ಲ. ಇಂತಹ ಸುದ್ದಿಗಳನ್ನು ಕೇಳಿ ನಾವಿಬ್ಬರೂ ನಕ್ಕು ಸುಮ್ಮನಾಗುತ್ತೇವೆ.@INCKarnataka
— Siddaramaiah (@siddaramaiah) December 27, 2018
ರಮೇಶ್ ಜಾರಕಿಹೊಳಿ ಮಾತ್ರವಲ್ಲ ಅವರ ಇಡೀ ಕುಟುಂಬ ಹಲವಾರು ವರ್ಷಗಳಿಂದ ನನಗೆ ಗೊತ್ತು. ರಮೇಶ್ ಅಪ್ಪಟ ಕಾಂಗ್ರೆಸಿಗ, ಅವರು ಪಕ್ಷ ಬಿಟ್ಟುಹೋಗುವುದಿಲ್ಲ. ಬಿಜೆಪಿ ಪ್ರಯತ್ನ ಯಶಸ್ಸಾಗುವುದಿಲ್ಲ.@INCKarnataka
— Siddaramaiah (@siddaramaiah) December 27, 2018
ಉಮೇಶ್ ಕತ್ತಿ ಹೇಳಿಕೆಗೆ ಸಿದ್ದರಾಮಯ್ಯ ಕಿಡಿ
ಶಾಸಕ ಉಮೇಶ್ ಕತ್ತಿಯವರ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ. ಅವರ ಅಧ್ಯಕ್ಷರಾದ ಯಡಿಯೂರಪ್ಪನವರೇ ಕತ್ತಿಯವರಿಗೆ ಬುದ್ದಿ ಹೇಳಿದ್ದಾರೆ. ಸರ್ಕಾರ ಪತನದ ಕನಸು ಕೈ ಬಿಟ್ಟು, ಮೊದಲು ಅವರೊಳಗಿನ ಭಿನ್ನಾಭಿಪ್ರಾಯವನ್ನು ಸರಿಮಾಡಿಕೊಳ್ಳಲಿ.@INCKarnataka
— Siddaramaiah (@siddaramaiah) December 27, 2018
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.