ಗೋಪಾಲಯ್ಯ ಅವರು ಸೋಮವಾರ ರಾತ್ರಿ 11 ರ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ತಮಗೆ ಸಣ್ಣ ಕೈಗಾರಿಕೆ ಖಾತೆ ನೀಡಿದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅದೇ ರೀತಿ ಬಿ.ಸಿ.ಪಾಟೀಲ ಅವರು ‘ಮುಖ್ಯಮಂತ್ರಿ ಹುದ್ದೆ ಕೊಟ್ಟರೂ ನಿಭಾಯಿಸುವ ಶಕ್ತಿ ಇದೆ. ಆದರೆ, ಎಲ್ಲವೂ ಅಂದುಕೊಂಡಂತೆ ಆಗುವುದಿಲ್ಲ’ ಎಂದು ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಿದ್ದರು.