ಯಡಿಯೂರಪ್ಪ ಭೇಟಿಯಾಗಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ‘ಸಂಭಾವ್ಯ ಸಚಿವರ ಪಟ್ಟಿ ಸಿದ್ಧಪಡಿಸಿಕೊಂಡು ಬನ್ನಿ, ನಡ್ಡಾ ಅವರ ಸಮ್ಮತಿ ಪಡೆದು ವಿಸ್ತರಣೆ ಪ್ರಕ್ರಿಯೆ ಮುಗಿಸಿ’ ಎಂದು ಸಲಹೆ ನೀಡಿದ್ದಾರೆ. ನಡ್ಡಾ ಅವರು ಭೇಟಿಗೆ ಮಂಗಳವಾರ ಸಮಯ ಕೊಟ್ಟರೆ ಅಥವಾ ದೂರವಾಣಿ ಮೂಲಕ ಚರ್ಚಿಸಿ ಸಮ್ಮತಿ ಸೂಚಿಸಿದರೆ ವಿಸ್ತರಣೆ ಬುಧವಾರ (ಜ.29) ನಡೆಯಲಿದೆ. ಇಲ್ಲದಿದ್ದರೆ, ದೆಹಲಿ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ವಿಸ್ತರಣೆ ನಡೆಯದು ಎಂದು ಪಕ್ಷದ ಮೂಲಗಳು ಹೇಳಿವೆ.