ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 12ಕ್ಕೆ ಸಂಪುಟ ವಿಸ್ತರಣೆ, ಪಕ್ಷೇತರರಿಗೆ ಸಚಿವ ಸ್ಥಾನ ಬಹುತೇಕ ಖಚಿತ

Last Updated 8 ಜೂನ್ 2019, 9:24 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ಇದೇ 12ರಂದು (ಬುಧವಾರ) ಸಂಪುಟ ವಿಸ್ತರಣೆ ಮಾಡಲಿದೆ. ಬೆಳಿಗ್ಗೆ 11.30ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಪಕ್ಷೇತರ ಶಾಸಕರಾದ ಆರ್.ಶಂಕರ್ ಹಾಗೂ ಎಚ್. ನಾಗೇಶ ಅವರು ಸಂಪುಟ ಸೇರುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.

‘ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದೆ. ಅವರು ಪ್ರಮಾಣ ವಚನ ಬೋಧನೆಗೆ ಬುಧವಾರ ಜೂನ್ 12ರಂದು ಬೆಳಿಗ್ಗೆ 11.30 ಕ್ಕೆ ಸಮಯ ನಿಗದಿ ಪಡಿಸಿದ್ದಾರೆ’ ಎಂದು ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸದ್ಯ ಸಂಪುಟದಲ್ಲಿ ಖಾಲಿ ಇರುವ ಮತ್ತೊಂದು ಸ್ಥಾನದ ಭರ್ತಿ ಮಾಡಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT