<p><strong>ಬೆಂಗಳೂರು: </strong>ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕೂ ಅಭ್ಯರ್ಥಿಗಳು ಅವಿರೋಧ ಆಯ್ಕೆ ಆಗುವುದರಿಂದ ಸಚಿವ ಸಂಪುಟ ವಿಸ್ತರಣೆ ಚರ್ಚೆ ಮುನ್ನೆಲೆಗೆ ಬಂದಿದೆ.</p>.<p>ಎಂ.ಟಿ.ಬಿ.ನಾಗರಾಜ್ ಮತ್ತು ಆರ್.ಶಂಕರ್ ಅವರಿಗೆ ಈ ಹಿಂದೆ ನೀಡಿದ ಭರವಸೆಯಂತೆ ಸಚಿವ ಸ್ಥಾನ ನೀಡುವುದು ಬಹುತೇಕ ಖಚಿತ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<p>ಕುರುಬ ಸಮುದಾಯಕ್ಕೆ ಸೇರಿದ ಕೆ.ಎಸ್.ಈಶ್ವರಪ್ಪ ಮತ್ತು ಬೈರತಿ ಬಸವರಾಜ್ ಅವರುಈಗಾಗಲೇ ಸಚಿವರಾಗಿದ್ದಾರೆ. ನಾಗರಾಜ್ ಮತ್ತು ಶಂಕರ್ ಅವರಿಗೆ ಸಚಿವ ಸ್ಥಾನ ನೀಡಿದರೆ ಲಿಂಗಾಯತ, ಒಕ್ಕಲಿಗ ಸಮುದಾಯವನ್ನು ಬಿಟ್ಟರೆ ಮತ್ತೊಂದು ಸಮುದಾಯಕ್ಕೆ ಅಧಿಕ ಸಚಿವ ಸ್ಥಾನಗಳನ್ನು ನೀಡಿದಂತಾಗುತ್ತದೆ ಎಂಬ ಚರ್ಚೆಯೂ ಶುರುವಾಗಿದೆ.</p>.<p>ಕುರುಬ ಸಮುದಾಯಕ್ಕೆ ನಾಲ್ಕು ಸಚಿವ ಸ್ಥಾನಗಳನ್ನು ನೀಡಿದರೆ, ಈ ಸಮುದಾಯಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡಿದ ಮೊದಲ ಸರ್ಕಾರ ಎಂಬ ಹೆಗ್ಗಳಿಕೆಯೂ ಸಿಕ್ಕಂತಾಗಲಿದೆ. ಯಾವುದೇ ಪಕ್ಷದ ಸರ್ಕಾರ ಇದ್ದಾಗಲೂ ಕುರುಬ ಸಮಾಜಕ್ಕೆ ಹೆಚ್ಚೆಂದರೆ ಎರಡು ಸಚಿವ ಸ್ಥಾನವಷ್ಟೇ ಸಿಕ್ಕಿತ್ತು.</p>.<p>‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಚಿವ ಸ್ಥಾನವನ್ನು ‘ತ್ಯಾಗ’ ಮಾಡಿ ಬಂದಿದ್ದಾರೆ ಮತ್ತು ಪಕ್ಷಕ್ಕೆ ತೆಗೆದುಕೊಳ್ಳುವಾಗಲೂ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು ಎಂಬ ಕಾರಣಕ್ಕೆ ಸಚಿವ ಸ್ಥಾನ ನೀಡಲೇಬೇಕು. ಇದಕ್ಕೆ ವರಿಷ್ಠರ ತಕರಾರು ಇಲ್ಲ’ ಎಂದು ಮೂಲಗಳು ತಿಳಿಸಿವೆ.</p>.<p>ಸಚಿವ ಸಂಪುಟದಲ್ಲಿ ಒಟ್ಟು 5 ಸ್ಥಾನಗಳು ಖಾಲಿ ಇದೆ . ನಾಗರಾಜ್, ಶಂಕರ್ ಮತ್ತು ಉಮೇಶ ಕತ್ತಿಗೆ ನೀಡಿದರೆ ಮೂರು ಭರ್ತಿ ಆಗುತ್ತದೆ. ಚುನಾವಣೆ ಫಲಿತಾಂಶ ಪ್ರಶ್ನಿಸಿದ ಪ್ರಕರಣ ಕೋರ್ಟ್ನಲ್ಲಿ ಇರುವುದರಿಂದ ರಾಜರಾಜೇಶ್ವರಿ ನಗರ ಹಾಗೂ ಮಸ್ಕಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿಲ್ಲ. ಕಾಂಗ್ರೆಸ್ಗೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿ ಅನರ್ಹಗೊಂಡಿರುವ ಈ ಕ್ಷೇತ್ರಗಳ ಮುನಿರತ್ನ<br />ಹಾಗೂ ಪ್ರತಾಪಗೌಡ ಪಾಟೀಲ ಅವರಿಗಾಗಿ ಎರಡು ಸ್ಥಾನಗಳನ್ನು ಖಾಲಿ ಉಳಿಸಲಾಗುತ್ತದೆಯೋ ಅಥವಾ ಈ ಹೊತ್ತಿನಲ್ಲಿ ಸಂಘ ಪರಿವಾರ ಹಿನ್ನೆಲೆಯ ಶಾಸಕರಿಗೆ ನೀಡಲಾಗುತ್ತದೆಯೋ ಎಂಬುದು ಇನ್ನೂ ನಿರ್ಧಾರವಾಗಿಲ್ಲ.</p>.<p>ಸರ್ಕಾರ ಬಂದು ವರ್ಷದ ಬಳಿಕ ಸಚಿವರ ಕಾರ್ಯವೈಖರಿ ಆಧರಿಸಿ ಕೆಲವರನ್ನು ಕೈಬಿಟ್ಟು, ಹೊಸಬರಿಗೆ ಅವಕಾಶ ಕೊಡುವ ಚಿಂತನೆ ಪಕ್ಷದಲ್ಲಿತ್ತು.ಅದಕ್ಕೂ ಚಾಲನೆ ಸಿಗಬಹುದು ಎಂಬ ಚರ್ಚೆಯೂ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕೂ ಅಭ್ಯರ್ಥಿಗಳು ಅವಿರೋಧ ಆಯ್ಕೆ ಆಗುವುದರಿಂದ ಸಚಿವ ಸಂಪುಟ ವಿಸ್ತರಣೆ ಚರ್ಚೆ ಮುನ್ನೆಲೆಗೆ ಬಂದಿದೆ.</p>.<p>ಎಂ.ಟಿ.ಬಿ.ನಾಗರಾಜ್ ಮತ್ತು ಆರ್.ಶಂಕರ್ ಅವರಿಗೆ ಈ ಹಿಂದೆ ನೀಡಿದ ಭರವಸೆಯಂತೆ ಸಚಿವ ಸ್ಥಾನ ನೀಡುವುದು ಬಹುತೇಕ ಖಚಿತ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<p>ಕುರುಬ ಸಮುದಾಯಕ್ಕೆ ಸೇರಿದ ಕೆ.ಎಸ್.ಈಶ್ವರಪ್ಪ ಮತ್ತು ಬೈರತಿ ಬಸವರಾಜ್ ಅವರುಈಗಾಗಲೇ ಸಚಿವರಾಗಿದ್ದಾರೆ. ನಾಗರಾಜ್ ಮತ್ತು ಶಂಕರ್ ಅವರಿಗೆ ಸಚಿವ ಸ್ಥಾನ ನೀಡಿದರೆ ಲಿಂಗಾಯತ, ಒಕ್ಕಲಿಗ ಸಮುದಾಯವನ್ನು ಬಿಟ್ಟರೆ ಮತ್ತೊಂದು ಸಮುದಾಯಕ್ಕೆ ಅಧಿಕ ಸಚಿವ ಸ್ಥಾನಗಳನ್ನು ನೀಡಿದಂತಾಗುತ್ತದೆ ಎಂಬ ಚರ್ಚೆಯೂ ಶುರುವಾಗಿದೆ.</p>.<p>ಕುರುಬ ಸಮುದಾಯಕ್ಕೆ ನಾಲ್ಕು ಸಚಿವ ಸ್ಥಾನಗಳನ್ನು ನೀಡಿದರೆ, ಈ ಸಮುದಾಯಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡಿದ ಮೊದಲ ಸರ್ಕಾರ ಎಂಬ ಹೆಗ್ಗಳಿಕೆಯೂ ಸಿಕ್ಕಂತಾಗಲಿದೆ. ಯಾವುದೇ ಪಕ್ಷದ ಸರ್ಕಾರ ಇದ್ದಾಗಲೂ ಕುರುಬ ಸಮಾಜಕ್ಕೆ ಹೆಚ್ಚೆಂದರೆ ಎರಡು ಸಚಿವ ಸ್ಥಾನವಷ್ಟೇ ಸಿಕ್ಕಿತ್ತು.</p>.<p>‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಚಿವ ಸ್ಥಾನವನ್ನು ‘ತ್ಯಾಗ’ ಮಾಡಿ ಬಂದಿದ್ದಾರೆ ಮತ್ತು ಪಕ್ಷಕ್ಕೆ ತೆಗೆದುಕೊಳ್ಳುವಾಗಲೂ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು ಎಂಬ ಕಾರಣಕ್ಕೆ ಸಚಿವ ಸ್ಥಾನ ನೀಡಲೇಬೇಕು. ಇದಕ್ಕೆ ವರಿಷ್ಠರ ತಕರಾರು ಇಲ್ಲ’ ಎಂದು ಮೂಲಗಳು ತಿಳಿಸಿವೆ.</p>.<p>ಸಚಿವ ಸಂಪುಟದಲ್ಲಿ ಒಟ್ಟು 5 ಸ್ಥಾನಗಳು ಖಾಲಿ ಇದೆ . ನಾಗರಾಜ್, ಶಂಕರ್ ಮತ್ತು ಉಮೇಶ ಕತ್ತಿಗೆ ನೀಡಿದರೆ ಮೂರು ಭರ್ತಿ ಆಗುತ್ತದೆ. ಚುನಾವಣೆ ಫಲಿತಾಂಶ ಪ್ರಶ್ನಿಸಿದ ಪ್ರಕರಣ ಕೋರ್ಟ್ನಲ್ಲಿ ಇರುವುದರಿಂದ ರಾಜರಾಜೇಶ್ವರಿ ನಗರ ಹಾಗೂ ಮಸ್ಕಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿಲ್ಲ. ಕಾಂಗ್ರೆಸ್ಗೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿ ಅನರ್ಹಗೊಂಡಿರುವ ಈ ಕ್ಷೇತ್ರಗಳ ಮುನಿರತ್ನ<br />ಹಾಗೂ ಪ್ರತಾಪಗೌಡ ಪಾಟೀಲ ಅವರಿಗಾಗಿ ಎರಡು ಸ್ಥಾನಗಳನ್ನು ಖಾಲಿ ಉಳಿಸಲಾಗುತ್ತದೆಯೋ ಅಥವಾ ಈ ಹೊತ್ತಿನಲ್ಲಿ ಸಂಘ ಪರಿವಾರ ಹಿನ್ನೆಲೆಯ ಶಾಸಕರಿಗೆ ನೀಡಲಾಗುತ್ತದೆಯೋ ಎಂಬುದು ಇನ್ನೂ ನಿರ್ಧಾರವಾಗಿಲ್ಲ.</p>.<p>ಸರ್ಕಾರ ಬಂದು ವರ್ಷದ ಬಳಿಕ ಸಚಿವರ ಕಾರ್ಯವೈಖರಿ ಆಧರಿಸಿ ಕೆಲವರನ್ನು ಕೈಬಿಟ್ಟು, ಹೊಸಬರಿಗೆ ಅವಕಾಶ ಕೊಡುವ ಚಿಂತನೆ ಪಕ್ಷದಲ್ಲಿತ್ತು.ಅದಕ್ಕೂ ಚಾಲನೆ ಸಿಗಬಹುದು ಎಂಬ ಚರ್ಚೆಯೂ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>