<p><strong>ಬೆಂಗಳೂರು: </strong>ಸಚಿವ ಸಂಪುಟ ವಿಸ್ತರಣೆ ಇದೇ ಶುಕ್ರವಾರ ನಡೆಯುವ ಸಾಧ್ಯತೆ ಇದೆ ಎಂದು ಬಿಜೆಪಿಯ ಉನ್ನತ ಮೂಲಗಳು ಹೇಳಿವೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವರಿಷ್ಠರ ಅನುಮತಿ ಪಡೆದು ನಾಳೆ (ಬುಧವಾರ) ಪಟ್ಟಿ ಆಖೈರುಗೊಳಿಸಲಿದ್ದಾರೆ. ಅಗತ್ಯವಿದ್ದರೆ, ಗುರುವಾರ ದೆಹಲಿಗೆ ಹೋಗಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದರು.</p>.<p>ಒಂದು ವೇಳೆ ಶುಕ್ರವಾರ ಆಗದೇ ಇದ್ದರೆ ಭಾನುವಾರ ಖಚಿತ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೆಲವು ಹಿರಿಯರನ್ನು ಕೈಬಿಡುವ ಚಿಂತನೆಯೂ ನಡೆದಿದೆ. ಇದಕ್ಕೆ ವರಿಷ್ಠರ ಅನುಮತಿ ತೆಗೆದುಕೊಳ್ಳಬೇಕಾಗುತ್ತದೆ. ಕೆಲವು ಸ್ಥಾನಗಳನ್ನು ಭರ್ತಿ ಮಾಡದೇ ಉಳಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದರು.</p>.<p>ಈ ಮಧ್ಯೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಶಾಸಕ ಮಹೇಶ್ ಕುಮಠಳ್ಳಿ, ಸಚಿವ ಸ್ಥಾನವೋ ನಿಗಮ– ಮಂಡಳಿಯೋ ಏನು ಸಿಗುತ್ತದೆಯೋ ಗೊತ್ತಿಲ್ಲ. ಯಾರಿಗೆ ಏನು ನೀಡಬೇಕುಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ಮತ್ತೊಬ್ಬ ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, ವಿಸ್ತರಣೆ ಬಗ್ಗೆ ಏನೂ ಮಾತನಾಡುವುದಿಲ್ಲ. ಸ್ವಲ್ಪ ದಿನ ಕಾಯಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಚಿವ ಸಂಪುಟ ವಿಸ್ತರಣೆ ಇದೇ ಶುಕ್ರವಾರ ನಡೆಯುವ ಸಾಧ್ಯತೆ ಇದೆ ಎಂದು ಬಿಜೆಪಿಯ ಉನ್ನತ ಮೂಲಗಳು ಹೇಳಿವೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವರಿಷ್ಠರ ಅನುಮತಿ ಪಡೆದು ನಾಳೆ (ಬುಧವಾರ) ಪಟ್ಟಿ ಆಖೈರುಗೊಳಿಸಲಿದ್ದಾರೆ. ಅಗತ್ಯವಿದ್ದರೆ, ಗುರುವಾರ ದೆಹಲಿಗೆ ಹೋಗಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದರು.</p>.<p>ಒಂದು ವೇಳೆ ಶುಕ್ರವಾರ ಆಗದೇ ಇದ್ದರೆ ಭಾನುವಾರ ಖಚಿತ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೆಲವು ಹಿರಿಯರನ್ನು ಕೈಬಿಡುವ ಚಿಂತನೆಯೂ ನಡೆದಿದೆ. ಇದಕ್ಕೆ ವರಿಷ್ಠರ ಅನುಮತಿ ತೆಗೆದುಕೊಳ್ಳಬೇಕಾಗುತ್ತದೆ. ಕೆಲವು ಸ್ಥಾನಗಳನ್ನು ಭರ್ತಿ ಮಾಡದೇ ಉಳಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದರು.</p>.<p>ಈ ಮಧ್ಯೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಶಾಸಕ ಮಹೇಶ್ ಕುಮಠಳ್ಳಿ, ಸಚಿವ ಸ್ಥಾನವೋ ನಿಗಮ– ಮಂಡಳಿಯೋ ಏನು ಸಿಗುತ್ತದೆಯೋ ಗೊತ್ತಿಲ್ಲ. ಯಾರಿಗೆ ಏನು ನೀಡಬೇಕುಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<p>ಮತ್ತೊಬ್ಬ ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, ವಿಸ್ತರಣೆ ಬಗ್ಗೆ ಏನೂ ಮಾತನಾಡುವುದಿಲ್ಲ. ಸ್ವಲ್ಪ ದಿನ ಕಾಯಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>