ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸಂಪುಟ ರಚನೆ: 16ರಂದು ಅಮಿತ್‌ ಶಾ ಜೊತೆ ಸಿ.ಎಂ ಚರ್ಚೆ

Last Updated 12 ಆಗಸ್ಟ್ 2019, 2:56 IST
ಅಕ್ಷರ ಗಾತ್ರ

ಬೆಳಗಾವಿ: ‘ಸಚಿವ ಸಂಪುಟ ರಚಿಸುವ ಕುರಿತು ಚರ್ಚಿಸಲು ಇದೇ ತಿಂಗಳ 16ರಂದು ಬರುವಂತೆ ಪಕ್ಷದ ಅಧ್ಯಕ್ಷ ಅಮಿತ್‌ ಶಾ ಆಹ್ವಾನ ನೀಡಿದ್ದಾರೆ’ ಎಂದು ಮುಖ್ಯಮಂತ್ರಿಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಭಾರಿ ಮಳೆ ಹಾಗೂ ಪ್ರವಾಹ ಪೀಡಿತ ಪ್ರದೇಶಗಳನ್ನು ಅಮಿತ್‌ ಶಾ ಜೊತೆ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಅವರು, ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದರು.

‘ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ, ಸಂಜೆಯೇ ನವದೆಹಲಿಗೆ ತೆರಳುವೆ. ಮರುದಿನ ಅಮಿತ್‌ ಶಾ ಜೊತೆ ಚರ್ಚಿಸಿ, ಸಚಿವ ಸಂಪುಟವನ್ನು ಅಂತಿಮಗೊಳಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT