ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್ ಮರುಪರಿಶೀಲನೆಗೆ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಿರಿ: ಡಿ.ಕೆ.ಶಿವಕುಮಾರ್

Last Updated 6 ಮೇ 2020, 6:40 IST
ಅಕ್ಷರ ಗಾತ್ರ

ಬೆಂಗಳೂರು:ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸುವುದೇನೆಂದರೆ, ಈಗಿನ ಆರ್ಥಿಕ ಸಂಕಷ್ಟದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಹಾಗೂ ಬಜೆಟ್ ಮರುಪರಿಶೀಲನೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ತಾವು ಶ್ರಮಿಕರ ಪರವಾಗಿ ತೆಗೆದುಕೊಂಡ ನಿರ್ಧಾರಕ್ಕೆ ಕಾಂಗ್ರೆಸ್ ಪಕ್ಷ ಅಭಿನಂದಿಸುತ್ತದೆ. ವಿಶೇಷವಾಗಿ ಬಜೆಟ್ ಅಧಿವೇಶನವನ್ನು ಕರೆಯಬೇಕು ಎಂದು ಮನವಿ ಮಾಡುತ್ತೇವೆ. ಬಜೆಟ್ ಮರುಪರಿಶೀಲನೆ ಮಾಡುವ ಅಗತ್ಯವಿದೆ. ಎಲ್ಲ ವರ್ಗದ ಜನರಿಗೆ ಸಹಾಯ ಮಾಡಬೇಕು. ವೃತ್ತಿಪರರಿಗೆ, ವೃತ್ತಿಯನ್ನು ಉಳಿಸಿಕೊಂಡು ಬಂದಿರುವವರಿಗೆ, ಕಾರ್ಮಿಕರು, ವೈದ್ಯರು, ಚಾಲಕರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಸಹಾಯ ಮಾಡುವ ಅಗತ್ಯವಿದೆ. ಇದಕ್ಕಾಗಿ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ.ಹೀಗಾಗಿ ಕೂಡಲೇ ಬಜೆಟ್ ಮರುಪರಿಶೀಲನೆ ಮಾಡುವ ಅಗತ್ಯವಿದೆ ಎಂದು ವಿಡಿಯೊದಲ್ಲಿ ತಿಳಿಸಿದ್ದಾರೆ.

ಸದ್ಯದ ಕಠಿಣ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ವೃತ್ತಿಪರರು, ರೈತರು, ದಿನಗೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಸಂಕಷ್ಟದಲ್ಲಿದ್ದು, ಅವರಿಗೆ ತಕ್ಷಣ ಆರ್ಥಿಕ ನೆರವಿನ ಅಗತ್ಯವಿದೆ. ಈ ಅಧಿವೇಶನ ಹೆಚ್ಚು ಪರಿಣಾಮಕಾರಿ ಹಾಗೂ ಅರ್ಥಪೂರ್ಣವಾಗಲಿದೆ. ದೇಶ ಕಟ್ಟುತ್ತಿರುವ ನಮ್ಮ ಸೋದರ, ಸೋದರಿಯರ ಹಿತ ಕಾಪಾಡುವ ಹೊಣೆ ನಮ್ಮೆಲ್ಲರದಾಗಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT