<p><strong>ಬೆಂಗಳೂರು</strong>: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರು ‘ಸೂಪರ್ ಸಿ.ಎಂ’ ರೀತಿ ವರ್ತಿಸುತ್ತಿದ್ದು, ಸರ್ಕಾರದಲ್ಲಿ ಬಿಎಸ್ವೈ ಕುಟುಂಬದ ಹಸ್ತಕ್ಷೇಪಕ್ಕೆ ಕಡಿವಾಣ ಹಾಕಬೇಕು’ ಎಂಬ ಕೂಗು ಬಿಜೆಪಿಯಲ್ಲಿ ಪ್ರಬಲವಾಗುತ್ತಿದೆ.</p>.<p>‘ವಿಜಯೇಂದ್ರ ಮತ್ತು ಅವರ ಬೆನ್ನಿಗೆ ನಿಂತಿರುವ ಗುಂಪು ಸರ್ಕಾರದ ಎಲ್ಲ ಸ್ತರಗಳಲ್ಲೂ ಕೈಯಾಡಿಸುತ್ತಿದೆ. ಇದಕ್ಕೆ ನಿರ್ಬಂಧ ಹಾಕಬೇಕು’ ಎಂದು ಹಕ್ಕೊತ್ತಾಯ ಮಂಡಿಸಿರುವ ಎರಡು ಪತ್ರಗಳನ್ನು ಶಾಸಕರ ಗುಂಪು ಹರಿಯಬಿಟ್ಟಿದೆ.</p>.<p>ಕಾರ್ಯನಿಮಿತ್ತ ಬೆಂಗಳೂರಿಗೆ ಬಂದಿದ್ದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಶನಿವಾರ ಭೇಟಿ ಮಾಡಿ, ದೂರು ಸಲ್ಲಿಸಲು ಶಾಸಕರ ಗುಂಪು ಶತಪ್ರಯತ್ನ ನಡೆಸಿತು. ಉಮೇಶ ಕತ್ತಿ, ಬಸನಗೌಡ ಪಾಟೀಲ ಯತ್ನಾಳ್, ಮುರುಗೇಶ ನಿರಾಣಿ ನೇತೃತ್ವದ ತಂಡ ನಡ್ಡಾ ಭೇಟಿಗೆ ಸಮಯವನ್ನೂ ಕೇಳಿತ್ತು. ‘ಇಂದು ಸಾಧ್ಯವಾಗದು; ಮಂಗಳವಾರ(ಮಾ.17ಕ್ಕೆ) ದೆಹಲಿಗೆ ಬನ್ನಿ’ ಎಂದು ನಡ್ಡಾ ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ.</p>.<p>‘ಪಕ್ಷಕ್ಕಾಗಿ ದುಡಿದವರಿಗೆ ಮನ್ನಣೆ ಸಿಗುತ್ತಿಲ್ಲ. ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಅನುದಾನ ಕೋರಿ ಮುಖ್ಯಮಂತ್ರಿ ಭೇಟಿ ಮಾಡಿದರೆ, ವಿಜಯೇಂದ್ರನ ಕಡೆ ಬೊಟ್ಟು ಮಾಡುತ್ತಾರೆ. ಇನ್ನು ಎಷ್ಟು ದಿನ ಇದನ್ನು ಸಹಿಸಿಕೊಂಡು ಕೂರುವುದು’ ಎಂದು ಶಾಸಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯೆಗಾಗಿ ವಿಜಯೇಂದ್ರ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಕರೆ ಸ್ವೀಕರಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರು ‘ಸೂಪರ್ ಸಿ.ಎಂ’ ರೀತಿ ವರ್ತಿಸುತ್ತಿದ್ದು, ಸರ್ಕಾರದಲ್ಲಿ ಬಿಎಸ್ವೈ ಕುಟುಂಬದ ಹಸ್ತಕ್ಷೇಪಕ್ಕೆ ಕಡಿವಾಣ ಹಾಕಬೇಕು’ ಎಂಬ ಕೂಗು ಬಿಜೆಪಿಯಲ್ಲಿ ಪ್ರಬಲವಾಗುತ್ತಿದೆ.</p>.<p>‘ವಿಜಯೇಂದ್ರ ಮತ್ತು ಅವರ ಬೆನ್ನಿಗೆ ನಿಂತಿರುವ ಗುಂಪು ಸರ್ಕಾರದ ಎಲ್ಲ ಸ್ತರಗಳಲ್ಲೂ ಕೈಯಾಡಿಸುತ್ತಿದೆ. ಇದಕ್ಕೆ ನಿರ್ಬಂಧ ಹಾಕಬೇಕು’ ಎಂದು ಹಕ್ಕೊತ್ತಾಯ ಮಂಡಿಸಿರುವ ಎರಡು ಪತ್ರಗಳನ್ನು ಶಾಸಕರ ಗುಂಪು ಹರಿಯಬಿಟ್ಟಿದೆ.</p>.<p>ಕಾರ್ಯನಿಮಿತ್ತ ಬೆಂಗಳೂರಿಗೆ ಬಂದಿದ್ದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಶನಿವಾರ ಭೇಟಿ ಮಾಡಿ, ದೂರು ಸಲ್ಲಿಸಲು ಶಾಸಕರ ಗುಂಪು ಶತಪ್ರಯತ್ನ ನಡೆಸಿತು. ಉಮೇಶ ಕತ್ತಿ, ಬಸನಗೌಡ ಪಾಟೀಲ ಯತ್ನಾಳ್, ಮುರುಗೇಶ ನಿರಾಣಿ ನೇತೃತ್ವದ ತಂಡ ನಡ್ಡಾ ಭೇಟಿಗೆ ಸಮಯವನ್ನೂ ಕೇಳಿತ್ತು. ‘ಇಂದು ಸಾಧ್ಯವಾಗದು; ಮಂಗಳವಾರ(ಮಾ.17ಕ್ಕೆ) ದೆಹಲಿಗೆ ಬನ್ನಿ’ ಎಂದು ನಡ್ಡಾ ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ.</p>.<p>‘ಪಕ್ಷಕ್ಕಾಗಿ ದುಡಿದವರಿಗೆ ಮನ್ನಣೆ ಸಿಗುತ್ತಿಲ್ಲ. ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಅನುದಾನ ಕೋರಿ ಮುಖ್ಯಮಂತ್ರಿ ಭೇಟಿ ಮಾಡಿದರೆ, ವಿಜಯೇಂದ್ರನ ಕಡೆ ಬೊಟ್ಟು ಮಾಡುತ್ತಾರೆ. ಇನ್ನು ಎಷ್ಟು ದಿನ ಇದನ್ನು ಸಹಿಸಿಕೊಂಡು ಕೂರುವುದು’ ಎಂದು ಶಾಸಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯೆಗಾಗಿ ವಿಜಯೇಂದ್ರ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಕರೆ ಸ್ವೀಕರಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>