‘ಪ್ರತಿನಿತ್ಯ 30 ಲಕ್ಷಕ್ಕೂ ಹೆಚ್ಚು ಮಂದಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಸಂಚರಿಸುತ್ತಾರೆ. ದಿನಕ್ಕೆ ಸರಾಸರಿ ₹8 ಕೋಟಿ ವರಮಾನ ಬರುತ್ತಿದೆ. ಸಭೆ, ಸಮಾರಂಭ, ಮದುವೆ, ಚಿತ್ರಮಂದಿರ ಬಂದ್ ಆಗಿರುವ ಕಾರಣ ಶನಿವಾರದಿಂದ ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಆದಂತೆ ಬಸ್ಗಳ ಸಂಚಾರವನ್ನೂ ಕಡಿಮೆ ಮಾಡಲಾಗುವುದು’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದರು.